ಸುಳ್ಯ ಪೊಲೀಸ್ ಠಾಣೆ ಮುಂಭಾಗದಲ್ಲಿ ಹಿಂದೂ ಕಾರ್ಯಕರ್ತರ ಬಂಧನ ವಿರೋಧಿಸಿ ಪ್ರತಿಭಟನೆ, ಕಲ್ಕುಡ ದೈವಸ್ಥಾನದಲ್ಲಿ ನ್ಯಾಯಕ್ಕಾಗಿ ಪ್ರಾರ್ಥನೆ

ನ್ಯೂಸ್ ನಾಟೌಟ್ : ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭ ಯುವತಿಗೆ ಕಿರುಕುಳ ನೀಡಿದ್ದಾನೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಅನ್ಯಕೋಮಿನ ಯುವಕನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಹಿಂದೂ ಸಂಘಟನೆಯ ಕಾರ್ಯಕರ್ತರನ್ನು ಬಂಧಿಸಿಸಲಾಗಿದೆ. ಇದನ್ನು ವಿರೋಧಿಸಿ ಕಾರ್ಯಕರ್ತರು ಸುಳ್ಯ ಪೊಲೀಸ್ ಠಾಣೆಯ ಮುಂಭಾಗದ ಮುಖ್ಯ ರಸ್ತೆಯಲ್ಲಿ ಇಂದು (ಸೆ.24) ಪ್ರತಿಭಟನೆ ನಡೆಸಿದ್ದಾರೆ. ಶಾಸಕಿ ಭಾಗೀರಥಿ ಮುರುಳ್ಯ, ಮುಖಂಡರಾದ ಹರೀಶ್ ಕಂಜಿಪಿಲಿ, ಎ.ವಿ.ತೀರ್ಥರಾಮ, ನವೀನ್ ನೆರಿಯ ಮತ್ತಿತರರು ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ್ದಾರೆ.ಪ್ರತಿಭಟನೆಗೂ ಮುನ್ನ ಕಲ್ಕುಡ ದೈವಸ್ಥಾನದಲ್ಲಿ ಈ ಬಗ್ಗೆ ಪ್ರಾರ್ಥನೆ ಸಲ್ಲಿಸಿ ಬಳಿಕ ಮೆರವಣಿಗೆ ಮೂಲಕ ನೂರಾರು ಮಂದಿ ಪ್ರತಿಭಟನಾಕಾರರು ಪೋಲೀಸ್ ಠಾಣೆಯ ಮುಂಭಾಗದಲ್ಲಿ ನ್ಯಾಯಕ್ಕಾಗಿ ಪ್ರತಿಭಟಿಸಿದ್ದಾರೆ. ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ವಿಶ್ವಹಿಂದೂ ಪರಿಷದ್ ಸುಳ್ಯ ಪ್ರಖಂಡದ ಅಧ್ಯಕ್ಷ ಸೋಮಶೇಖರ ಪೈಕ, ಬಜರಂಗದಳ ಸಂಚಾಲಕ ಹರಿಪ್ರಸಾದ್‌ಎಲಿಮಲೆ, ಬಿಜೆಪಿ ಹಾಗೂ ಸಂಘ ಪರಿವಾರ ಸಂಘಟನೆಗಳ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು. Click