KSRTC ಬಸ್ ಮತ್ತು ಸ್ಕೂಲ್ ಬಸ್ ನಡುವೆ ಭೀಕರ ಅಪಘಾತ..! 3 ವಿದ್ಯಾರ್ಥಿಗಳ ಕಾಲು ತುಂಡು, 2 ಮಕ್ಕಳು ಸ್ಥಳದಲ್ಲೇ ಸಾವು..!

ನ್ಯೂಸ್ ನಾಟೌಟ್: ಸ್ಕೂಲ್ ಬಸ್ ಮತ್ತು ಸರ್ಕಾರಿ ಬಸ್ ನಡುವೆ ಭೀಕರ ರಸ್ತೆ ಅಪಘಾತ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಬಳಿ ಇಂದು(ಸೆ.5) ನಡೆದಿದ್ದು, ಅಪಘಾತದ ತೀವ್ರತೆಗೆ ಸ್ಕೂಲ್ ಬಸ್‌ನಲ್ಲಿ ಇದ್ದ ಮೂವರು ಮಕ್ಕಳ ಕಾಲುಗಳೇ ತುಂಡಾಗಿದೆ. ಇನ್ನಿಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಕುಡುಡಿ ಗ್ರಾಮದ ಒಂದನೇ ತರಗತಿಯ ವಿದ್ಯಾರ್ಥಿ ಸಮರ್ಥ್ ಹಾಗೂ ಅದೇ ಗ್ರಾಮದ ಏಳನೇ ತರಗತಿ ವಿದ್ಯಾರ್ಥಿ ಶ್ರೀಕಾಂತ್ ಮೃತಪಟ್ಟಿದ್ದಾರೆ. ಕಪಗಲ್‌ನಿಂದ ಮಾನ್ವಿ ಕಡೆ ಹೊರಟ್ಟಿದ ಖಾಸಗಿ ಸ್ಕೂಲ್‌ನ ಬಸ್ ಮತ್ತು ಸಿಂಧನೂರು ಕಡೆಯಿಂದ ರಾಯಚೂರು ಕಡೆಗೆ ಹೊರಟ್ಟಿದ ಸರ್ಕಾರಿ ಕೆಎಸ್‌ಆರ್‌ಟಿಸಿ ಬಸ್ ಮಧ್ಯೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಸ್ಕೂಲ್‌ ಬಸ್‌ನಲ್ಲಿ ಒಟ್ಟು 40ಕ್ಕೂ ಹೆಚ್ಚು ಮಕ್ಕಳು ಇದ್ದರು. ಆ ಪೈಕಿ 18 ಮಕ್ಕಳನ್ನು ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಉಳಿದ 14 ಮಕ್ಕಳಿಗೆ ರಾಯಚೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೂ ಮೂವರು ಮಕ್ಕಳ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.ಗಂಭೀರವಾಗಿ ಗಾಯಗೊಂಡಿರುವ ವಿದ್ಯಾರ್ಥಿಗಳನ್ನು ಐಸಿಯುಗೆ ಶಿಫ್ಟ್ ಮಾಡಲಾಗಿದೆ. Click