- +91 73497 60202
- [email protected]
- September 29, 2024 9:54 AM
ನ್ಯೂಸ್ ನಾಟೌಟ್ : ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವಿರಾಜಪೇಟೆಯ ಸಂತ ಅನ್ನಮ್ಮ ಶಾಲೆಯ ಶಿಕ್ಷಕಿ ಕ್ರಿಸ್ಟಲಿನೊ(50) ಮೃತಪಟ್ಟಿದ್ದಾರೆ. ಈ ಘಟನೆ ಹುಣಸೂರಿನ ಬನ್ನಿಕುಪ್ಪೆ ಬಳಿ ನಡೆದಿದೆ. ಕ್ರಿಸ್ಟಲಿನೊ ವಿರಾಜಪೇಟೆ ಬೇಟೋಳಿ ನಿವಾಸಿ ಎಂದು ಗುರುತಿಸಲಾಗಿದೆ. ಬುಧವಾರ ತಮ್ಮ ಮಗನನ್ನು ಮೈಸೂರಿನ ಕಾಲೇಜಿಗೆ ಸೇರಿಸಿ ಪತಿಯೊಂದಿಗೆ ಕಾರಿನಲ್ಲಿ ವಿರಾಜಪೇಟೆಗೆ ಮರಳುತ್ತಿದ್ದ ಸಂದರ್ಭ ಬನ್ನಿಕುಪ್ಪೆ ಬಳಿ ಬೊಲೆರೋ ವಾಹನ ಢಿಕ್ಕಿಯಾಗಿತ್ತು. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಕ್ರಿಸ್ಟಲಿನೊರನ್ನು ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು(ಸೆ.26) ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. Click
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ