ಮಂಗಳೂರು: ಸಾಕುನಾಯಿಯನ್ನು ಬಲವಂತವಾಗಿ ತ್ಯಾಜ್ಯ ವಿಲೇವಾರಿ ವಾಹನಕ್ಕೆ ತುಂಬಿಸಿದ ಮನೆಯವರು..! ಮಂಗಳೂರು ಮಹಾನಗರ ಪಾಲಿಕೆಗೆ ಪಶುಪಾಲನಾ ಇಲಾಖೆಯಿಂದ ನೋಟಿಸ್..!

ನ್ಯೂಸ್‌ ನಾಟೌಟ್‌: ಸಾಕುನಾಯಿಯನ್ನು ಜೀವಂತವಾಗಿಯೇ ತ್ಯಾಜ್ಯ ವಿಲೇವಾರಿ ಮಾಡುವ ವಾಹನಕ್ಕೆ ತುಂಬಿಸಿ ಡಂಪಿಂಗ್ ಯಾರ್ಡ್ ಗೆ ಸಾಗಿಸಿದ ಪ್ರಕರಣ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರು ನಗರದ ಡೊಂಗರಕೇರಿಯಲ್ಲಿ ಈ ಕೃತ್ಯ ನಡೆದಿದ್ದು, ಮನೆಯಲ್ಲಿ ಹಲವು ವರ್ಷಗಳಿಂದ ಸಾಕಿದ್ದ ಹೆಣ್ಣು ಶ್ವಾನವನ್ನು ಮನೆಯವರು ತ್ಯಾಜ್ಯ ವಿಲೇವಾರಿ ವಾಹನಕ್ಕೆ ಬಲಾತ್ಕಾರವಾಗಿ ತುಂಬಿಸಿ ಸಾಗಿಸಿದ್ದಾರೆ. ಈ ನೀಚ ಕೃತ್ಯ ಶನಿವಾರ(ಸೆ.7) ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮನೆಯೊಂದರ ಸಿಸಿಟಿವಿ ಕ್ಯಾಮರಾದಲ್ಲಿ ಈ ದೃಶ್ಯ ಸೆರೆಯಾಗಿದೆ. ವಿಷಯ ತಿಳಿದ ಬೆನ್ನಲ್ಲೇ ಪಶುಪಾಲನಾ ಇಲಾಖೆಯು ಮಂಗಳೂರು ಮಹಾನಗರ ಪಾಲಿಕೆಗೆ ನೋಟಿಸ್ ನೀಡಿದೆ. ಡೊಂಗರಕೇರಿಯಿಂದ ಪಚ್ಚನಾಡಿಯ ಡಂಪಿಂಗ್ ಯಾರ್ಡ್ ನಲ್ಲಿ ಬಿಡಲಾಗಿರುವ ಶ್ವಾನ ಸದ್ಯ ನಾಪತ್ತೆಯಾಗಿದೆ ಎನ್ನಲಾಗಿದೆ. Click