- +91 73497 60202
- [email protected]
- September 22, 2024 10:53 PM
ಮಂಗಳೂರು: ಸಮುದ್ರ ತೀರದಲ್ಲಿ ನಿಗೂಢವಾಗಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆ..! ಕೊಲೆಯಾಗಿರೋ ಶಂಕೆ..!
ನ್ಯೂಸ್ ನಾಟೌಟ್: ಸಮುದ್ರ ತೀರದಲ್ಲಿ ನಿಗೂಢವಾಗಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದ್ದು, ಪಣಂಬೂರಿನ ತೋಟ ಬೆಂಗ್ರೆ ಅಳಿವೆಬಾಗಿಲು ಸಮೀಪ ಸಿಕ್ಕ ಈ ದೇಹದಲ್ಲಿನ ಗಾಯಗಳ ಪ್ರಕಾರ ಕೊಲೆ ಶಂಕೆ ವ್ಯಕ್ತವಾಗಿದೆ. ಮೂಲತಃ ಬಾಗಲಕೋಟೆ ಜಿಲ್ಲೆಯ ಅಮೀನಗಡ ನಿವಾಸಿ ಮುತ್ತು ಬಸವರಾಜ್ ವಡ್ಡರ್ ಆಲಿಯಾಸ್ ಮುದುಕಪ್ಪ ಮೃತಪಟ್ಟವರು ಎಂದು ತಿಳಿದು ಬಂದಿದೆ. ಇವರು ಹಲವು ವರ್ಷಗಳಿಂದ ತೋಟ ಬೆಂಗ್ರೆ ಎಂಬಲ್ಲಿನ ಬಾಡಿಗೆ ಮನೆಯೊಂದರಲ್ಲಿ ಒಬ್ಬರೇ ವಾಸವಿದ್ದು, ಕೂಲಿ ಕೆಲಸ ಮಾಡಿಕೊಂಡಿದ್ದರು ಎಂದು ತಿಳಿದು ಬಂದಿದೆ. ಮೃತದೇಹದ ಬಲ ಕಾಲು, ಬಲ ಕೈ ಹಾಗೂ ಹಣೆಯ ಭಾಗದಲ್ಲಿ ರಕ್ತ ಗಾಯ ಇದ್ದು, ಮೇಲ್ನೋಟಕ್ಕೆ ಕೊಲೆ ಮಾಡಿರುವ ರೀತಿ ಕಂಡುಬರುತ್ತಿದೆ. ಮೃತರು ವಿಪರೀತ ಕುಡಿತದ ಚಟ ಹೊಂದಿದ್ದು, ಯಾರೊಂದಿಗೋ ಜಗಳವಾಡಿಕೊಂಡು ಕೊಲೆಗೀಡಾಗಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕಿಸಿದ್ದಾರೆ. ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ