- +91 73497 60202
- [email protected]
- September 22, 2024 11:04 PM
ನ್ಯೂಸ್ ನಾಟೌಟ್: ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕನ ಬೆಂಬಲಿಗರಿಂದ ಸಾಕ್ಷಿಗಳಿಗೆ ಬೆದರಿಕೆ ಹಾಕಲಾಗಿದೆ ಎಂದು ವರದಿ ತಿಳಿಸಿದೆ. ಸಂತ್ರಸ್ತೆ ನೀಡಿದ ದೂರಿಗೆ ಸಂಬಂಧಿಸಿದ ಸಾಕ್ಷಿದಾರರ ಮಗನಿಗೆ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಮುನಿರತ್ನ ವಿರುದ್ಧ ಸಾಕ್ಷಿ ಹೇಳಿದರೆ ಮನೆಗೆ ಬೆಂಕಿ ಹಚ್ಚುತ್ತೇವೆ. ನಿಮ್ಮ ವಂಶವೇ ಇರದಂತೆ ಮಾಡುತ್ತೆವೆಂದು ಬಿಜೆಪಿ ಕಾರ್ಯಕರ್ತೆ ಸುನಂದಮ್ಮ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಸಾಕ್ಷಿಯ ಮನೆಗೆ ಏಕಾಏಕಿ ನುಗ್ಗಿದ ಸುನಂದಮ್ಮ ಹಾಗೂ ಬೆಂಬಲಿಗರು, ಸಂತ್ರಸ್ಥೆಯ ಮಗನಿಗೆ ಬೆದರಿಕೆ ಹಾಕಿದ್ದಾರೆ. ಯಶವಂತಪುರ ಪೊಲೀಸ್ ಠಾಣೆಗೆ ಸಂತ್ರಸ್ಥೆಯ ಮಗ ದೂರು ನೀಡಿದ್ದಾರೆ. ಯಶವಂತಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎನ್ನಲಾದ ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಪ್ರಕರಣ ಸಂಬಂಧ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. Click
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ