- +91 73497 60202
- [email protected]
- September 19, 2024 3:47 AM
ನ್ಯೂಸ್ ನಾಟೌಟ್: ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಪೊಲೀಸರು ಚಾರ್ಜ್ಶೀಟ್ ಸಲ್ಲಿಕೆ ಮಾಡಿದ್ದಾರೆ. ದರ್ಶನ್ ಸೇರಿ ಅನೇಕರ ವಿರುದ್ಧ ದೋಷಾರೋಪ ಪಟ್ಟಿಯಲ್ಲಿ ವಿವರಣೆ ನೀಡಲಾಗಿದೆ. ಈ ಮಧ್ಯೆ ರೇಣುಕಾಸ್ವಾಮಿ ಕೈ ಮುಗಿದು ಅಂಗಲಾಚುತ್ತಿರುವ ಫೋಟೋ ವೈರಲ್ ಆಗುತ್ತಿದೆ. ಪಟ್ಟಣಗೆರೆ ಶೆಡ್ನಲ್ಲಿ ಕೊಲೆ ಮಾಡುವ ಸಂದರ್ಭದಲ್ಲಿ ತೆಗೆದ ಫೋಟೋ ಇದಾಗಿದೆ. ಶೆಡ್ ಗೆ ಕರೆದೊಯ್ಯುವ ಪ್ಲ್ಯಾನ್ ಮಾಡಿದ್ದು ದರ್ಶನ್ ಎನ್ನುವ ಆರೋಪ ಇದೆ. ರೇಣುಕಾಸ್ವಾಮಿಗೆ ಸಾಕಷ್ಟು ಚಿತ್ರಹಿಂಸೆ ನೀಡಲಾಗಿತ್ತು. ಈ ಟಾರ್ಚರ್ನಿಂದಲೇ ಅವರು ಮೃತಪಟ್ಟಿದ್ದರು. ಈಗ ಶೆಡ್ ನಲ್ಲಿ ಲಾರಿಗಳ ನಡುವೆ ಕೈ ಮುಗಿದು ಅಂಗಲಾಚುತ್ತಿರುವ ಫೋಟೋ ಅದಕ್ಕೆ ಸಾಕ್ಷಿ ಎಂಬಂತೆ ವೈರಲ್ ಆಗುತ್ತಿದೆ. ರೇಣುಕಾ ಸ್ವಾಮಿ ಅಂಗಲಾಚುತ್ತಿರುವ ಫೋಟೋ ಮಾತ್ರವಲ್ಲದೆ ಅವರು ಶವವಾಗಿ ಬಿದ್ದ ಫೋಟೋಗಳೂ ಸಿಕ್ಕಿವೆ. ಆರೋಪಿಗಳ ಮೊಬೈಲ್ನಲ್ಲಿ ಇದನ್ನು ಸೆರೆಹಿಡಿದುಕೊಳ್ಳಲಾಗಿತ್ತು. ಆ ಬಳಿಕ ಇದನ್ನು ಡಿಲೀಟ್ ಮಾಡಿದ್ದರು. ಈಗ ಈ ಫೋಟೋಗಳನ್ನು ರಿಟ್ರೀವ್ ಮಾಡಲಾಗಿದೆ. ಚಾರ್ಜ್ಶೀಟ್ನಲ್ಲಿ ಈ ಫೋಟೋಗಳನ್ನು ಲಗತ್ತಿಸಲಾಗಿದೆ. ಇದು ಪ್ರಕರಣದಲ್ಲಿ ಪ್ರಮುಖ ಸಾಕ್ಷಿಗಳಲ್ಲಿ ಒಂದು ಎನ್ನಲಾಗಿದೆ.
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ