ಪುತ್ತೂರು: ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಮಾನವ ಹಕ್ಕುಗಳ ಆಯೋಗಕ್ಕೆ ದೂರು..! ಪೊಲೀಸರ ವಿರುದ್ಧವೂ ದೂರು ನೀಡಿದ ಮಹಿಳೆ..!

ನ್ಯೂಸ್ ನಾಟೌಟ್: ಬಿಜೆಪಿ ಮುಖಂಡ ಅರುಣ್ ಕುಮಾರ್‌ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ, ಕೊಲೆ ಬೆದರಿಕೆ ಆರೋಪ ಮಾಡಿದ್ದ ಸಂತ್ರಸ್ತ ಮಹಿಳೆ ಇದೀಗ ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ್ದಾರೆ. ಪುತ್ತಿಲ ಹಾಗೂ ಪೊಲೀಸರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ತಾನು ದೂರು ನೀಡಿದಂತೆ ಪೊಲೀಸರು ಪ್ರಕರಣ ದಾಖಲಿಸಿಲ್ಲ ಎಂದು ಪುತ್ತೂರು ನಗರ ಮತ್ತು ಮಹಿಳಾ ಪೊಲೀಸರ ವಿರುದ್ಧ ಆರೋಪಿಸಿದ್ದು, ಪುತ್ತಿಲ ವಿರುದ್ಧ ಕ್ರಮಕ್ಕೆ ಒತ್ತಾಸಿದ್ದಾರೆ. ಈಗಾಗಲೇ ಮಹಿಳೆ ದೂರಿನನ್ವಯ ಪುತ್ತಿಲ ವಿರುದ್ಧ ಅತ್ಯಾಚಾರ ಪ್ರಕರಣ (ಐಪಿಸಿ 376) ದಾಖಲಿಸಿರುವ ಪೊಲೀಸರು, ಸೆ.3ರಂದು ಬೆಂಗಳೂರು ಹೊಟೇಲ್‌ನಲ್ಲಿ ಮಹಜರು ನಡೆಸಿದ್ದು, ಸೆ.2ರಂದು ಸಂತ್ರಸ್ತೆಗೆ ವೈದ್ಯಕೀಯ ಪರೀಕ್ಷೆ ನಡೆಸಿದ್ದಾರೆ. ಬಳಿಕ ನ್ಯಾಯಾಧೀಶರ ಮುಂದೆ ಸಂತ್ರಸ್ತೆಯ ಹೇಳಿಕೆ ಪಡೆದುಕೊಳ್ಳಲಾಗಿದೆ ಎನ್ನಲಾಗಿದೆ. Click