ರೇಣುಕಾಸ್ವಾಮಿ ಹತ್ಯೆ ಕೇಸ್‌ ನಲ್ಲಿ ಮೊದಲ ಜಾಮೀನು ಮಂಜೂರು..! ಇಲ್ಲಿದೆ ಸಂಪೂರ್ಣ ಮಾಹಿತಿ

ನ್ಯೂಸ್‌ ನಾಟೌಟ್ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಮೊದಲ ಜಾಮೀನು ಮಂಜೂರು ಆಗಿದ್ದು, ಎ16 ಆರೋಪಿಯಾಗಿದ್ದ ಕೇಶವಮೂರ್ತಿ ಎಂಬ ವ್ಯಕ್ತಿಗೆ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿದೆ. ರೇಣುಕಾಸ್ವಾಮಿ ಶವ ವಿಲೇವಾರಿಯಲ್ಲಿ ಭಾಗಿಯಾಗಿದ್ದ ಕೇಶವಮೂರ್ತಿಯನ್ನು ಸಾಕ್ಷ್ಯ ನಾಶ ಪ್ರಕರಣದಲ್ಲಿ ಬಂಧನ ಮಾಡಲಾಗಿತ್ತು. ಕೇಶವಮೂರ್ತಿ ಪರ ವಕೀಲ ರಂಗನಾಥ ರೆಡ್ಡಿ ವಾದಿಸಿದ್ದರು. ಆರೋಪಿ ದರ್ಶನ್‌ ಗೆ ಇಂದು(ಸೆ.23) ಮಹತ್ವದ ದಿನವಾಗಿದ್ದು, ಜಾಮೀನಿಗಾಗಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಯಲಿದೆ. ದರ್ಶನ್ ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿ 26 ದಿನಗಳಿಂದ ಕಾಲ ಕಳೆಯುತ್ತಿದ್ದಾರೆ. ಶನಿವಾರ ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದ ದರ್ಶನ್ ಪರ ವಕೀಲರು ತುರ್ತಾಗಿ ವಿಚಾರಣೆ ಮಾಡುವಂತೆ ಮನವಿ ಮಾಡಿದ್ದರು. ಸೋಮವಾರಕ್ಕೆ ಜಾಮೀನು ಅರ್ಜಿ ಮುಂದೂಡಲಾಗಿತ್ತು. ಹೀಗಾಗಿ ಇಂದು ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. Click