ಕೊಡಗು: ನಾಳೆ (ಸೆ.17) ಕಾವೇರಿ ತೀರ್ಥೋದ್ಭವ, ಎಷ್ಟು ಹೊತ್ತಿಗೆ ಮುಹೂರ್ತ..? ಇಲ್ಲಿದೆ ಸಂಪೂರ್ಣ ಮಾಹಿತಿ

ನ್ಯೂಸ್ ನಾಟೌಟ್: ಕೊಡಗಿನ ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಭವಕ್ಕೆ ಮುಹೂರ್ತ ನಿಗಧಿಯಾಗಿದೆ. ಅದರಂತೆ ತಲಕಾವೇರಿಯಲ್ಲಿರುವ ತೀರ್ಥ ಕುಂಡದಲ್ಲಿ ಅ.17 ರಂದು ಗುರುವಾರ ಬೆಳಗ್ಗೆ 7:40 ಕ್ಕೆ ಸಲ್ಲುವ ತುಲಾ ಲಗ್ನದಲ್ಲಿ ಕಾವೇರಿ ತೀರ್ಥ ರೂಪದಲ್ಲಿ ಉಗಮವಾಗಲಿದೆ ಎಂದು ವರದಿ ತಿಳಿಸಿದೆ. ಜೀವನದಿ ಕಾವೇರಿ ಉಗಮ ಸ್ಥಾನ ತಲಕಾವೇರಿಯ ಬ್ರಹ್ಮಕುಂಡದಲ್ಲಿ ಮಾತೆ ಕಾವೇರಿ ಜಲರೂಪದಲ್ಲಿ ದರ್ಶನ ಕೊಡುತ್ತಾಳೆ ಎಂದು ನಂಬಲಾಗುವ ಪವಿತ್ರ ತೀರ್ಥೋದ್ಭವಕ್ಕೆ ಈಗಾಗಲೇ ‌ಸಿದ್ಧತೆ ನಡೆಸಲಾಗುತ್ತಿದೆ. ಈ ದೇವತಾ ಕಾರ್ಯದಲ್ಲಿ ಭಾಗವಹಿಸಲು ರಾಜ್ಯದ ನಾನಾ ಭಾಗಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಅಗಮಿಸುವ ನಿರೀಕ್ಷೆ ಇದೆ ಎನ್ನಲಾಗಿದೆ. ಪ್ರತಿ ವರ್ಷವೂ ತುಲಾ ಮಾಸದಲ್ಲಿ ನಡೆಯುವ ಈ ಜಾತ್ರೆಗೆ ಸೆ.26 ರಿಂದಲೇ ಸಿದ್ಧತೆ ಶುರುವಾಗುತ್ತದೆ. ಅಕ್ಟೋಬರ್‌ ಕಾಲಿಡುತ್ತಿದ್ದಂತೆಯೇ ಭಾಗಮಂಡಲ, ತಲಕಾವೇರಿಯಲ್ಲಿ ಸಂಭ್ರಮದ ವಾತಾವರಣ ನಿರ್ಮಾಣ ಆಗುತ್ತದೆ. Click