9ನೇ ತರಗತಿ ಬಾಲಕಿಯ ಕುತ್ತಿಗೆಗೆ ದುಪಟ್ಟಾ ಬಿಗಿದು ಅತ್ಯಾಚಾರ..! ಮಲ ವಿಸರ್ಜನೆಗೆಂದು ಗದ್ದೆಗೆ ಹೋಗಿದ್ದ ಬಾಲಕಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ..!

ನ್ಯೂಸ್ ನಾಟೌಟ್: 14 ವರ್ಷದ ಬಾಲಕಿಯೊಬ್ಬಳು ಗದ್ದೆಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆಕೆಯ ಕುತ್ತಿಗೆಗೆ ದುಪಟ್ಟಾವನ್ನು ಬಿಗಿಯಾಗಿ ಕಟ್ಟಲಾಗಿತ್ತು. ಆಕೆಯ ಮೇಲೆ ಮೂವರು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂಬುದು ಬಯಲಾಗಿದೆ. ಉತ್ತರ ಪ್ರದೇಶದ ಲಕ್ನೋದ ಚಿನ್ಹಾಟ್ ಪ್ರದೇಶದಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. ಅದೃಷ್ಟವಶಾತ್ ಆಕೆ ಇನ್ನೂ ಜೀವಂತವಾಗಿದ್ದಳು. ಮಲ ವಿಸರ್ಜನೆಗೆಂದು ಗದ್ದೆಗೆ ಹೋಗಿದ್ದ ಆ ಬಾಲಕಿಯ ಮೇಲೆ ಅತ್ಯಾಚಾರ ನಡೆಸಲಾಗಿದೆ.ಪ್ರಾಥಮಿಕ ವರದಿಗಳ ಪ್ರಕಾರ, ಸುತ್ತಮುತ್ತಲಿನ ಊರಿನ ಮೂವರು ಬಾಲಕರು ಆ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಸ್ಥಳೀಯ ಅಧಿಕಾರಿಗಳು ಈ ಘಟನೆಯ ಕುರಿತು ತನಿಖೆಯನ್ನು ಪ್ರಾರಂಭಿಸಿದ್ದಾರೆ. Click