ಸರ್ಕಾರಿ ಬಸ್ ಡಿಕ್ಕಿಯಾಗಿ ಪಾದಾಚಾರಿ ಸ್ಥಳದಲ್ಲೇ ಸಾವು..! ಮಂತ್ರಾಲಯಕ್ಕೆ ಹೊರಟಿದ್ದ ಬಸ್ ಚಾಲಕ ಪರಾರಿ..!

ನ್ಯೂಸ್ ನಾಟೌಟ್: ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಪಾದಾಚಾರಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಯಚೂರಿನ ತುಂಗಭದ್ರಾ ಗ್ರಾಮದ ಬಳಿ ಇಂದು(ಅ.21) ನಡೆದಿದೆ. ಆಂಧ್ರ ಪ್ರದೇಶದ ಮಾಧವರಂನ ವೀರೇಶ್ (34) ಮೃತ ಪಾದಾಚಾರಿ ಎಂದು ಗುರುತಿಸಲಾಗಿದೆ. ವೀರೇಶ್ ಗಿಲ್ಲೇಸುಗೂರಿನಿಂದ ಆಂಧ್ರಪ್ರದೇಶದ ಮಾಧವರಂ ಕಡೆಗೆ ಹೊರಟಿದ್ದ ವೇಳೆ ರಾಯಚೂರಿನಿಂದ ಮಂತ್ರಾಲಯಕ್ಕೆ ಹೊರಟಿದ್ದ ಸರ್ಕಾರಿ ಬಸ್ ಡಿಕ್ಕಿಯಾಗಿದೆ. ಅಪಘಾತದ ಬಳಿಕ ಬಸ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನೆ ಸಂಬಂಧ ಇಡಪನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿ ತಿಳಿಸಿದೆ.