ಮುಲ್ಕಿ: ಮನೆಯೊಳಗೆ ಏಕಾಏಕಿ ನುಗ್ಗಿದ ಚಿರತೆ..! ಅರಣ್ಯ ಇಲಾಖೆ ಅಧಿಕಾರಿಗಳಿಂದ ಸತತ 5 ಗಂಟೆ ಕಾರ್ಯಾಚರಣೆ..!

ನ್ಯೂಸ್ ನಾಟೌಟ್: ಮನೆಯೊಳಗೆ ಏಕಾಏಕಿ ಚಿರತೆಯೊಂದು ನುಗ್ಗಿದ ಘಟನೆ ಮಂಗಳೂರು ಹೊರವಲಯದ ಮೂಲ್ಕಿಯಲ್ಲಿ ಇಂದು(ಅ.20) ನಡೆದಿದೆ. ಮೂಲ್ಕಿಯ ಅಕ್ಕಸಾಲಿಗರ ಕೇರಿ ಬಳಿಯ ಸದಾನಂದ ಕೋಟ್ಯಾನ್ ಎಂಬವರ ಮನೆಯ ಅಡುಗೆ ಕೋಣೆಯೊಳಗೆ ಚಿರತೆ ನುಗ್ಗಿದ್ದು, ಮೂಡಬಿದ್ರೆ ವಲಯದ ಅರಣ್ಯ ಅಧಿಕಾರಿಗಳ ಕಾರ್ಯಾಚರಣೆಯಿಂದ ಬೋನ್ ಮೂಲಕ ಚಿರತೆ ಸೆರೆ ಹಿಡಿಯಲಾಗಿದೆ. ಸುಮಾರು ಒಂದು ವರ್ಷ ಪ್ರಾಯದ ಚಿರತೆ ನುಗ್ಗಿದ ವೇಳೆ ನಾಯಿ ಬೊಗಳಲು ಆರಂಭಿಸಿದ್ದು, ಮನೆ ಮಂದಿ ಚಿರತೆ ನೋಡಿ ಕಂಗಾಲಾಗಿದ್ದಾರೆ. ಕೂಡಲೇ ಸ್ಥಳೀಯರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ತಿಳಿಸಿದ್ದು, ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಅಧಿಕಾರಿಗಳು ಸುಮಾರು 5 ಗಂಟೆಗಳ ಕಾರ್ಯಾಚರಣೆಯ ಬಳಿಕ ಚಿರತೆಯನ್ನು ಸೆರೆ ಹಿಡಿದಿದ್ದಾರೆ. Click