ನ್ಯೂಸ್ ನಾಟೌಟ್: ಸುಳ್ಯದ ಕೆ.ವಿ.ಜಿ. ಕಾನೂನು ಮಹಾವಿದ್ಯಾಲಯದಲ್ಲಿ 2025 – 26ನೇ ಸಾಲಿನ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಚುನಾವಣೆ ಶುಕ್ರವಾರ (ಸೆ.26) ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ವಿದ್ಯಾರ್ಥಿ ಸಂಘದ ನಾಯಕನಾಗಿ ಅಂತಿಮ ವರ್ಷದ ಕಾನೂನು ಪದವಿ ವಿದ್ಯಾರ್ಥಿ ನಾಚಪ್ಪ ಸಿ ಎನ್ ಆಯ್ಕೆಯಾಗಿದ್ದಾರೆ.
ಉಪನಾಯಕನಾಗಿ ನಾಲ್ಕನೇ ವರ್ಷದ ಬಿಎಎಲ್ ಎಲ್ ಬಿ ವಿದ್ಯಾರ್ಥಿ ನಿಹಾಲ್ ಎಮ್. ಡಿ., ಕಾರ್ಯದರ್ಶಿಯಾಗಿ ಅಂತಿಮ ವರ್ಷದ ಎಎಲ್ ಎಲ್ ಬಿ ವಿದ್ಯಾರ್ಥಿ ವಿಜಯ್ ಕೆ, ಕ್ರೀಡಾ ಕಾರ್ಯದರ್ಶಿಯಾಗಿ ಅಂತಿಮ ವರ್ಷದ ಎಲ್ ಎಲ್ ಬಿ ವಿದ್ಯಾರ್ಥಿ ಉಮ್ಮರ್ ಮುಕ್ತಾರ್ ಆಯ್ಕೆಯಾಗಿದ್ದು, ಜತೆ ಕಾರ್ಯದರ್ಶಿಯಾಗಿ ಅಂತಿಮ ವರ್ಷದ ಬಿ ಎಎಲ್ ಎಲ್ ಬಿ ವಿದ್ಯಾರ್ಥಿನಿ ಅನಘ. ಕೆ. ಪಿ. ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ. ಚುನಾವಣಾ ಅಧಿಕಾರಿಗಳಾಗಿ ಕಾಲೇಜಿನ ಹಿರಿಯ ಗ್ರಂಥಪಾಲಕ ವಸಂತ್ ಕುಮಾರ್ ಕಜ್ಜೋಡಿ ಹಾಗೂ ರಾಜ್ಯಶಾಸ್ತ್ರ ಉಪನ್ಯಾಸಕರಾದ ರಂಜನ್ ಕೆ. ರವರು ಚುನಾವಣಾ ಕಾರ್ಯ ನಿರ್ವಹಿಸಿದರು. ಕಾಲೇಜಿನ ಪ್ರಾoಶುಪಾಲರಾದ ಟೀನಾ. ಎಚ್ ಎಸ್, ಉಪನ್ಯಾಸಕ ಹಾಗೂ ಉಪನ್ಯಾಸಕೇತರರು ಚುನಾವಣಾ ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡರು. ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ (ರಿ) ಸುಳ್ಯ ಇದರ ಪ್ರಧಾನ ಕಾರ್ಯದರ್ಶಿ ಆರ್ಕಿಟೆಕ್ಟ್ ಅಕ್ಷಯ್. ಕೆ. ಸಿ.,ಕಾಲೇಜಿನ ಆಡಳಿತಾಧಿಕಾರಿ ಪ್ರೊ. ಕೆ.ವಿ. ದಾಮೋದರ ಗೌಡ ಇವರ ಗೌರವ ಉಪಸ್ಥಿತಿ ಯಲ್ಲಿ ಚುನಾವಣಾ ಪ್ರಕ್ರಿಯೆ ಸುಸೂತ್ರವಾಗಿ ನೆರವೇರಿತು.













