ನ್ಯೂಸ್ ನಾಟೌಟ್ : ನಟ ದರ್ಶನ್ (Darshan) ಕುಟುಂಬದಲ್ಲಿ ದಸರಾ ಹಬ್ಬ ಯಾವಾಗ್ಲೂ ವಿಶೇಷವಾಗೇ ಇರುತ್ತದೆ. ಪ್ರತಿ ವರ್ಷ ದರ್ಶನ್ ಆರ್ಆರ್ ನಗರದ ತಮ್ಮ ನಿವಾಸದ ರಸ್ತೆಯುದ್ದಕ್ಕೂ ಕಾರುಗಳನ್ನ ನಿಲ್ಲಿಸಿ ಆಯುಧ ಪೂಜೆ (Ayudha Pooja) ಮಾಡುತ್ತಿದ್ದರು. ಆದರೆ ಈಗ ದರ್ಶನ್ ಜೈಲಲ್ಲೇ ದಸರಾ ಹಬ್ಬ ಮಾಡುವಂತಾಗಿದೆ. ಆದರರೂ ದರ್ಶನ್ ಪತ್ನಿ ವಿಜಯಲಕ್ಷ್ಮಿ (Vijayalakshmi) ಹಾಗೂ ಪುತ್ರ ವಿನೀಶ್ ಸಂಪ್ರದಾಯದಂತೆ ಆಯುಧಪೂಜಾ ಹಬ್ಬ ಮಾಡಿದ್ದಾರೆ.
ಅಮ್ಮ ಮಗ ಇಬ್ಬರೂ ದಸರಾ ಹಬ್ಬ ಮಾಡಿರುವ ಫೋಟೋವನ್ನ ವಿಜಯಲಕ್ಷ್ಮಿ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಅಪ್ಲೋಡ್ ಮಾಡಿದ್ದಾರೆ. ದರ್ಶನ್ ಕಾರ್ ಪ್ರಿಯರಾಗಿದ್ದು ಐಶಾರಾಮಿ ಎಲ್ಲಾ ಬ್ರ್ಯಾಂಡ್ ಕಾರ್ಗಳನ್ನ ಹೊಂದಿದ್ದಾರೆ.













