ನ್ಯೂಸ್ ನಾಟೌಟ್ : ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ: ಚಾಪ್ಟರ್ 1 ಚಿತ್ರ ಬಿಡುಗಡೆಯಾದಾಗಿನಿಂದ ಭರ್ಜರಿ ಪ್ರದರ್ಶನ ಕಾಣುತ್ತಿದ್ದು, ನೆನ್ನೆ (ಭಾನುವಾರ) ರಾಷ್ಟ್ರಪತಿ ಭವನದಲ್ಲಿ ವಿಶೇಷ ಪ್ರದರ್ಶನ ಕಂಡಿದೆ. ಚಿತ್ರವು ಅಕ್ಟೋಬರ್ 5 ರಂದು ನವದೆಹಲಿಯಲ್ಲಿ ಬೆಳಿಗ್ಗೆ 10 ರಿಂದ ರಾತ್ರಿ 9 ರವರೆಗೆ ವಿಶೇಷ ಮೂರು ಪ್ರದರ್ಶನಗಳನ್ನು ಕಂಡಿದೆ ಎನ್ನಲಾಗಿದೆ.
ಕನ್ನಡ ಭಾಷೆಯ ಚಿತ್ರಕ್ಕೆ ಇದು ರಾಷ್ಟ್ರೀಯ ಮನ್ನಣೆ ದೊರಕಿರುವ ಅಪರೂಪದ ಕ್ಷಣಕ್ಕೆ ಸಾಕ್ಷಿಯಾಗಿದೆ.ಕಾಂತಾರ: ಚಾಪ್ಟರ್ 1 ಚಿತ್ರವು ಅಕ್ಟೋಬರ್ 2ರಂದು ದೇಶದಾದ್ಯಂತ ಏಳು ಭಾಷೆಗಳಲ್ಲಿ ತೆರೆಕಂಡಿದೆ. ಪ್ರಮುಖ ರಾಜ್ಯಗಳಲ್ಲಿ ಹೌಸ್ಫುಲ್ ಪ್ರದರ್ಶನ ಕಾಣುತ್ತಿದೆ. ಚಿತ್ರಕ್ಕೆ ಅಭಿಮಾನಿಗಳು ಮತ್ತು ಉದ್ಯಮದ ದಿಗ್ಗಜರಿಂದ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ನಟ ಪ್ರಭಾಸ್, ಜೂನಿಯರ್ ಎನ್ಟಿಆರ್ ಮತ್ತು ಯಶ್ ಸೇರಿದಂತೆ ಹಲವರು ರಿಷಬ್ ಶೆಟ್ಟಿ ಅವರ ಸಾಧನೆಯನ್ನು ಶ್ಲಾಘಿಸಿದ್ದಾರೆ.













