ನ್ಯೂಸ್ ನಾಟೌಟ್: ಇತ್ತೀಚೆಗೆ ಅಜ್ಜಾವರದಲ್ಲಿ ಗ್ರಂಥಾಲಯ ಸಪ್ತಾಹ ಕಾರ್ಯಕ್ರಮ ನಡೆಯಿತು. ಗ್ರಾಮ ಪಂಚಾಯತ್ ಅಜ್ಜಾವರ, ಅರಿವು ಕೇಂದ್ರ, ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಅಜ್ಜಾವರ ಹಾಗೂ ಡಾ. ಕೆ. ಶಿವರಾಮ ಕಾರಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ಳಾರೆ – ಪೆರುವಾಜೆ ಇದರ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ಸಹಯೋಗದಲ್ಲಿ ಕಾರ್ಯಕ್ರಮ ನೆರವೇರಿತು. ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಸುಳ್ಯದ ಮುದ್ದು ಮಕ್ಕಳ ಶಾಲೆ ಅಂಜಲಿ ಮೊಂಟೆಸ್ಸರಿಯ ಮುಖ್ಯಸ್ಥೆ ಗೀತಾಂಜಲಿಯವರು ಪಾಲ್ಗೊಂಡಿದ್ದರು. ವಿದ್ಯಾರ್ಥಿಗಳ ಕೌಶಲ್ಯವನ್ನು ಹೆಚ್ಚಿಸುವುದರ ಬಗ್ಗೆ ಗೀತಾಂಜಲಿಯವರು ಮಾತನಾಡಿದರು. ಇದೇ ವೇಳೆ ಹಲವಾರು ಮಂದಿ ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.













