27.7 C
Sullia
Sunday, March 8, 2026

ಮೆಟ್ರೋ ನಿಲ್ದಾಣದಲ್ಲಿ ಟ್ರ‍್ಯಾಕ್‌ಗೆ ಹಾರಿ ವ್ಯಕ್ತಿ ಆತ್ಮಹತ್ಯೆ: ಏನಿದು ಘಟನೆ?

ನ್ಯೂಸ್ ನಾಟೌಟ್ :ಮೆಟ್ರೋ ರೈಲು ಬರುತ್ತಿದ್ದಂತೆ ಟ್ರ‍್ಯಾಕ್‌ಗೆ ಹಾರಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ (Bengaluru) ನೇರಳೆ ಮಾರ್ಗದ (Purple Line)  ಕೆಂಗೇರಿ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಮೃತ ವ್ಯಕ್ತಿಯನ್ನು ವಿಜಯಪುರ (Vijayapura) ಮೂಲದ ಶಾಂತಗೌಡ ಪಾಟೀಲ್ (38) ಎಂದು ಗುರುತಿಸಲಾಗಿದೆ. ಬೆಂಗಳೂರಿನ ರಾಜಾಜಿನಗರದಲ್ಲಿ ಪತ್ನಿ ಹಾಗೂ ಪುಟ್ಟ ಕಂದಮ್ಮನೊಂದಿಗೆ ವಾಸಿಸುತ್ತಿದ್ದು, ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎಂದು ತಿಳಿದುಬಂದಿದೆ

ಶುಕ್ರವಾರ (ಡಿ.5) ಬೆಳಗ್ಗೆ ಈ ಅವಘಡ ಸಂಭವಿಸಿದೆ. ಮೆಟ್ರೋ ಬರುತ್ತಿದ್ದಂತೆಯೇ ವ್ಯಕ್ತಿ ಟ್ರ್ಯಾಕ್‌ಗೆ ಹಾರಿದ್ದು, ಪರಿಣಾಮ ಮೆಟ್ರೋ ಹರಿದು ವ್ಯಕ್ತಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಘಟನಾ ಸ್ಥಳಕ್ಕೆ ಕೆಂಗೇರಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮೆಟ್ರೋ ಸಿಬ್ಬಂದಿ ಘಟನೆಯ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಮತ್ತು ವೈದ್ಯಕೀಯ ಸಿಬ್ಬಂದಿ ಟ್ರ‍್ಯಾಕ್ ಮೇಲಿದ್ದ ಶವವನ್ನು ತೆರವುಗೊಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Latest Articles