21.6 C
Sullia
Saturday, March 7, 2026

ಕೇರಳದಲ್ಲಿ ಬಾಂಗ್ಲಾದೇಶದವನೆಂದು ಗುಂಪಿನಿಂದ ಭೀಕರ ಹಲ್ಲೆ: ವಲಸೆ ಕಾರ್ಮಿಕ ಸಾವು

ನ್ಯೂಸ್ ನಾಟೌಟ್ :ಕಳ್ಳತನದ ಶಂಕೆಯ ಮೇಲೆ ಪಾಲಕ್ಕಾಡ್ ಜಿಲ್ಲೆಯ ವಲಯಾರ್ ಬಳಿ ಸ್ಥಳೀಯ ನಿವಾಸಿಗಳ ಗುಂಪೊಂದು ಛತ್ತೀಸ್‌ಗಢದ 31 ವರ್ಷದ ವಲಸೆ ಕಾರ್ಮಿಕನ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಮೃತನನ್ನು ಛತ್ತೀಸ್‌ಗಢದ ಬಿಲಾಸ್‌ಪುರ ಮೂಲದ ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದೆ. ಈತ ಕಾಂಜಿಕೋಡ್‌ನಲ್ಲಿ ವಾಸಿಸುತ್ತಿದ್ದ. ಅಟ್ಟಪ್ಪಲ್ಲಂ ಪೂರ್ವದಲ್ಲಿ ಈ ಘಟನೆ ನಡೆದಿದೆ. ಸ್ಥಳೀಯರ ಗುಂಪು ನಡೆಸಿದ ಹಲ್ಲೆಯಲ್ಲಿ ಗಂಭೀರ ಗಾಯಗೊಂಡಿದ್ದ ಕಾರ್ಮಿಕನನ್ನು ಪಾಲಕ್ಕಾಡ್ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾನೆ.

ಭಯಾರ್ ಎಂಬಾತ ಕಳ್ಳತನ ಮಾಡಲು ಈ ಪ್ರದೇಶದ ಹಲವಾರು ಮನೆಗಳಿಗೆ ನುಗ್ಗಿದ್ದ. ಬಾಂಗ್ಲಾದೇಶದವನಿರಬೇಕೆಂದು ಕೆಲವರು ಹಿಡಿದು ಥಳಿಸಿದ್ದರು ಎಂದು ಸ್ಥಳೀಯ ನಿವಾಸಿಗಳು ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಐವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಎಲ್ಲಾ ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತಾ ಅಡಿಯಲ್ಲಿ ಕೊಲೆ ಪ್ರಕರಣ ದಾಖಲಿಸಲಾಗಿದೆ. ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Related Articles

LEAVE A REPLY

Please enter your comment!
Please enter your name here

Latest Articles