ನ್ಯೂಸ್ ನಾಟೌಟ್: ಇತ್ತೀಚೆಗೆ ಕುಕ್ಕುಜಡ್ಕದಲ್ಲಿ ನಡೆದ 28ನೇ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸುಳ್ಯದ ಸಹಕಾರಿ ರತ್ನ ಚಂದ್ರ ಕೋಲ್ಚಾರ್ ಅವರನ್ನು ಗುರುತಿಸಿ ‘ಸಹಕಾರ ಸಮಾಜಸೇವೆ ಪುರಸ್ಕಾರ’ ನೀಡಲಾಗಿದೆ.
ಡಿಸೆಂಬರ್ 30ರಂದು ಕನ್ನಡ ಸಾಹಿತ್ಯ ಪರಿಷತ್ ಸುಳ್ಯ ಘಟಕ ವತಿಯಿಂದ ಸಮ್ಮೇಳನ ನಡೆದಿತ್ತು. ಸಮ್ಮೇಳನದ ಅಧ್ಯಕ್ಷ ತೇಜಕುಮಾರ್ ಬಡ್ಡಡ್ಕ ಉಪಸ್ಥಿತರಿದ್ದರು. ಚಂದ್ರಶೇಖರ ಪೇರಾಲು, ಲತಾಶ್ರೀ ಸುಪ್ರೀತ್ ಮೊಂಟಡ್ಕ, ತೇಜಸ್ವಿ ಕಡಪಳ ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.













