Latestಕ್ರೈಂದೇಶ-ವಿದೇಶ

ಭದ್ರತಾ ಪಡೆಗಳೊಂದಿಗಿನ ಗುಂಡಿನ ಚಕಮಕಿಯಲ್ಲಿ 26 ನಕ್ಸಲೀಯರ ಹತ್ಯೆ..! ದಟ್ಟ ಅರಣ್ಯದಲ್ಲಿ ಕಾರ್ಯಾಚರಣೆ

213

ನ್ಯೂಸ್ ನಾಟೌಟ್: ಛತ್ತೀಸ್‌ ಗಢದ ನಾರಾಯಣ್ ಪುರ-ಬಿಜಾಪುರ್ ಗಡಿಯಲ್ಲಿ ಬುಧವಾರ(ಮೇ.21) ಭದ್ರತಾ ಪಡೆಗಳೊಂದಿಗೆ ನಡೆದ ಭೀಕರ ಗುಂಡಿನ ಚಕಮಕಿಯಲ್ಲಿ ಕನಿಷ್ಠ 26 ನಕ್ಸಲರು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಈ ಗುಂಡಿನ ಚಕಮಕಿಯಲ್ಲಿ ಪೊಲೀಸರ ಬೆಂಬಲಿಗರೊಬ್ಬರು ಮೃತಪಟ್ಟಿದ್ದಾರೆ ಮತ್ತು ಒಬ್ಬರು ಪೊಲೀಸ್ ಗೆ ಗಾಯವಾಗಿದೆ ಎಂದು ಪೊಲೀಸ ತಿಳಿಸಿದ್ದಾರೆ.
ರಾಜ್ಯ ಪೊಲೀಸರು ದೊಡ್ಡ ಪ್ರಮಾಣದ ನಕ್ಸಲ್ ವಿರೋಧಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದು, ದಟ್ಟ ಅರಣ್ಯ ಅಭುಜ್‌ ಮದ್ ಪ್ರದೇಶದಲ್ಲಿ ಗುಂಡಿನ ಚಕಮಕಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಾರಾಯಣ್ ಪುರ, ಬಿಜಾಪುರ್, ದಂತೇವಾಡ ಮತ್ತು ಕಾಂಕೇರ್ ಜಿಲ್ಲೆಗಳಿಂದ ಜಿಲ್ಲಾ ಮೀಸಲು ಪಡೆ (DRG) ಜಂಟಿ ತಂಡಗಳ ಮೇಲೆ ಶಸ್ತ್ರಸಜ್ಜಿತ ಮಾವೋವಾದಿಗಳು ಹೊಂಚುಹಾಕಿ ದಾಳಿ ನಡೆಸಿದ ನಂತರ ಗುಂಡಿನ ಚಕಮಕಿ ಪ್ರಾರಂಭವಾಯಿತು ಎನ್ನಲಾಗಿದೆ.

ಮಾವೋವಾದಿಗಳ ‘ಮ್ಯಾಡ್’ ವಿಭಾಗದ ಹಿರಿಯ ಕಾರ್ಯಕರ್ತರ ಉಪಸ್ಥಿತಿಯ ಬಗ್ಗೆ ಗುಪ್ತಚರ ಮಾಹಿತಿ ಸಿಕ್ಕಿ, ಭದ್ರತಾ ಪಡೆಗಳು ಪ್ರಸಿದ್ಧ ನಕ್ಸಲೀಯ ಭದ್ರಕೋಟೆಯಾದ ಅಭುಜ್‌ಮದ್ ಪ್ರದೇಶದೊಳಗೆ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದವು, ಈ ವೇಳೆ ಈ ಘಟನೆ ನಡೆದಿದೆ.

ಗೂಗಲ್ ಮ್ಯಾಪ್ ನಂಬಿ ಗದ್ದೆಗೆ ಬಂದಿಳಿದ ಟಿಟಿ..! ಟ್ರ್ಯಾಕ್ಟರ್‌ ಗೆ ಟಿಟಿ ವಾಹನವನ್ನು ಕಟ್ಟಿ ಎಳೆದ ಸ್ಥಳೀಯರು..!

ಪಾಕಿಸ್ತಾನದ ದಾಳಿಯಿಂದ ಹಾನಿಗೊಳಗಾದ ಮಸೀದಿಯನ್ನು ಸರಿಪಡಿಸಿ ಕೊಟ್ಟ ಭಾರತೀಯ ಸೇನೆ..! ಸೇನೆಯ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ

See also  ಬೆಳಾಲು: ನೀರು ಕೇಳುವ ನೆಪದಲ್ಲಿ ಮನೆಗೆ ಬಂದ ಯುವಕ! :ಪಿಯುಸಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ-ದೂರು ದಾಖಲು
  Ad Widget   Ad Widget     Ad Widget   Ad Widget   Ad Widget   Ad Widget