ನ್ಯೂಸ್ ನಾಟೌಟ್: ರಾಮನವಮಿಯ ಪಾನಕ, ಮಜ್ಜಿಗೆ ಸೇವಿಸಿ ಒಂದೇ ಗ್ರಾಮದ 45 ಮಂದಿ ಅಸ್ವಸ್ಥರಾಗಿದ್ದಾರೆ.
ಏನಿದು ಘಟನೆ..?
ಬುಧವಾರ ರಾಮನವಮಿ ಹಿನ್ನೆಲೆಯಲ್ಲಿ ಕುಣಿಗಲ್ ತಾಲೂಕಿನ ಮಂಗಳಾ ಗೇಟ್ ಬಳಿಯಿರುವ ಸುಬ್ರಮಣ್ಯ ದೇವಸ್ಥಾನದಲ್ಲಿ ಭಕ್ತರು ಮಜ್ಜಿಗೆ, ಪಾನಕವನ್ನು ಸೇವನೆ ಮಾಡಿದ್ದರು. ಇವರಿಗೆ ಮಧ್ಯರಾತ್ರಿಯಿಂದ ಹೊಟ್ಟೆನೋವು ಬಂದಿದೆ. ಬಳಿಕ ವಾಂತಿ- ಭೇದಿ ಶುರುವಾಗಿದೆ. ಹೀಗಾಗಿ ಬೆಳಗ್ಗೆ ಯಡಿಯೂರಿನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲು ಮಾಡಲಾಗಿತ್ತು. ಅಲ್ಲಿ ಚಿಕಿತ್ಸೆ ನೀಡಲಾಯಿತಾದರೂ ಆರೋಗ್ಯ ಸುಧಾರಿಸದ ಹಿನ್ನೆಲೆಯಲ್ಲಿ ಕುಣಿಗಲ್ ತಾಲೂಕು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿದೆ.