Latestಕ್ರೈಂರಾಜ್ಯವೈರಲ್ ನ್ಯೂಸ್

₹500 ಲಂಚ ಸ್ವೀಕರಿಸಿದ್ದಕ್ಕೆ ನಿವೃತ್ತಿಯಾದ 10 ವರ್ಷದ ನಂತರ ಗ್ರಾಮಲೆಕ್ಕಾಧಿಕಾರಿ ಜೈಲು ಪಾಲು..! 5 ವರ್ಷದ ಹಿಂದೆಯೇ ಮೃತಪಟ್ಟಿರುವ ದೂರುದಾರ..!

373

ನ್ಯೂಸ್ ನಾಟೌಟ್: ನಿವೃತ್ತಿಯಾಗಿ 10 ವರ್ಷ ಕಳೆದ ಬಳಿಕ ಗ್ರಾಮ ಲೆಕ್ಕಾಧಿಕಾರಿ ಲಂಚ ಸ್ವೀಕರಿಸಿದ್ದಕ್ಕೆ ಜೈಲು ಪಾಲಾದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ನಾಗೇಶ ಶಿವಂಗೇಕರ್ ಜೈಲು ಪಾಲಾದ ನಿವೃತ್ತ ಗ್ರಾಮ ಲೆಕ್ಕಾಧಿಕಾರಿ ಎಂದು ಗುರುತಿಸಲಾಗಿದೆ.

ನಾಗೇಶ ಶಿವಂಗೇಕರ್ 30 ವರ್ಷಗಳ ಹಳೇಯ ಪ್ರಕರಣದಲ್ಲಿ ಜೈಲು ಪಾಲಾಗಿದ್ದಾರೆ. ಬೆಳಗಾವಿ ತಾಲೂಕಿನ ಕಡೋಲಿ ಗ್ರಾಮದ ಲಕ್ಷ್ಮಣ ಕಟಾಂಬಳೆ ಅನ್ನೋರ ಬಳಿ 500 ರೂಪಾಯಿ ಲಂಚ ಸ್ವೀಕರಿಸಿದ್ದರು ಎಂಬ ಪ್ರಕರಣ ಇದಾಗಿದೆ.

ಪಹಣಿ ಪತ್ರದಲ್ಲಿ ವಾಟ್ನಿ ಮಾಡಿ ಉತಾರ ಕೊಡಲು 500 ರೂಪಾಯಿ ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಿ ಕಟಾಂಬಳೆ ಲೋಕಾಯುಕ್ತಕ್ಕೆ ದೂರು ನೀಡಿದ್ದರು. 500 ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದರು. ಆರೋಪಿಯನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದರು.
2006ರಲ್ಲಿ ಗ್ರಾಮ ಲೆಕ್ಕಾಧಿಕಾರಿಗೆ ಒಂದು ವರ್ಷ ಜೈಲು, 1 ಸಾವಿರ ದಂಡ ವಿಧಿಸಲಾಗಿತ್ತು. ಬಳಿಕ ಗ್ರಾಮ ಲೆಕ್ಕಾಧಿಕಾರಿ ನಾಗೇಶ ಧಾರವಾಡ ಹೈಕೋರ್ಟ್ ‌ಮೋರೆ ಹೋಗಿದ್ದರು. ಹೈಕೋರ್ಟ್​ನಲ್ಲಿ ನಾಗೇಶ ಶಿವಂಗೇಕರ್ ​ಗೆ ರಿಲಿಫ್ ಸಿಕ್ಕಿತ್ತು.

ಹೈಕೋರ್ಟ್​ ‌ಆದೇಶ ಪ್ರಶ್ನಿಸಿ ಲೋಕಾಯುಕ್ತ ಸುಪ್ರೀಂ ಕೋರ್ಟ್​ ಮೆಟ್ಟಿಲೇರಿತ್ತು. ಸುಪ್ರೀಂ ಕೋರ್ಟ್ ಲೋಕಾಯುಕ್ತ ಪರ ಈಗ ತೀರ್ಪು ಪ್ರಕಟ ಮಾಡಿದೆ. ಕೆಲಸದಿಂದ ನಿವೃತ್ತಿಯಾಗಿ 10 ವರ್ಷದ ಬಳಿಕ ಆರೋಪಿ ಜೈಲು ಪಾಲಾಗಿದ್ದಾರೆ. ಸದ್ಯ ಬೆಳಗಾವಿ ಹಿಂಡಲಗಾ ಜೈಲಿಗೆ ನಾಗೇಶ ಶಿವಂಗೇಕರ್ ​ನನ್ನು ಕಳುಹಿಸಲಾಗಿದೆ. ಇನ್ನೊಂದು ವಿಚಾರ ಅಂದರೆ ದೂರುದಾರ ಮೃತಪಟ್ಟಿದ್ದು, ಐದು ವರ್ಷ ಕಳೆದಿದೆ.

ಪಾಕಿಸ್ತಾನಕ್ಕೆ 5ನೇ ತಲೆಮಾರಿನ ಫೈಟರ್ ಜೆಟ್‌ ಪೂರೈಸಲು ಚೀನಾದ ಜೊತೆ ದೊಡ್ಡ ಒಪ್ಪಂದ..! 6 ತಿಂಗಳಿನಿಂದ ಚೀನಾದಲ್ಲಿ ತರಬೇತಿ ಪಡೆಯುತ್ತಿರುವ ಪಾಕ್ ಸೈನಿಕರು..!

ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಕೇಸ್​ ಬೆನ್ನಲ್ಲೇ ಸರ್ಕಾರದಿಂದ ಹೊಸ ನಿಯಮ ಜಾರಿ..! ಕಾರ್ಯಕ್ರಮ ಆಯೋಜಕರು ಕಾನೂನು ಮೀರಿದ್ರೆ 3 ವರ್ಷ ಜೈಲು..!

See also  ಸಿನಿಮಾ ನಟರಲ್ಲಿ ಯಾರು ಯಾರಿಗೆ ನಟ್ಟು ಬೋಲ್ಟ್ ಟೈಟ್ ಮಾಡಬೇಕು ಅಂತ ಗೊತ್ತಿದೆ ಎಂದು ಡಿಕೆಶಿ ವಾರ್ನಿಂಗ್..! ಈ ಬಗ್ಗೆ ಫಿಲ್ಮ್ ಚೇಂಬರ್ ಅಧ್ಯಕ್ಷ ಹೇಳಿದ್ದೇನು..?
  Ad Widget   Ad Widget   Ad Widget       Ad Widget     Ad Widget   Ad Widget   Ad Widget   Ad Widget   Ad Widget   Ad Widget