ಕರಾವಳಿ

ಹೆಜ್ಜೇನು ದಾಳಿಗೆ ಬಾವಿಗಿಳಿದು ಪವಾಡಸದೃಶ ಪಾರಾದ 79ರ ವೃದ್ದ,ಓರ್ವನಿಗೆ ಗಾಯ , ಇಬ್ಬರು ಗಂಭೀರ

ನ್ಯೂಸ್ ನಾಟೌಟ್ : ಒಣಗಿದ ಬಟ್ಟೆ ತೆಗೆಯಲೆಂದು ಮನೆಯ ಮಹಡಿ ಹತ್ತುವ ವೇಳೆ ಹೆಜ್ಜೇನು ಕಡಿದು ಗಾಯಗೊಂಡಿರುವ ಘಟನೆ ವರದಿಯಾಗಿದೆ. ಇದರಿಂದ ಓರ್ವ 79ರ ವೃದ್ದ ಬಾವಿಗಿಳಿದು ಪಾರಾದರೆ, ಉಳಿದ ಇಬ್ಬರು ಗಂಭೀರ ಗೊಂಡಿದ್ದಾರೆ. ಮತ್ತೋರ್ವರು ಗಾಯಗೊಂಡಿರುವ ಘಟನೆ ಮಂಗಳೂರು ಸಮೀಪದ ನರಿಂಗಾನ ಗ್ರಾಮದ ಬೋಳ ಎಂಬಲ್ಲಿ ನಡೆದಿದೆ.

ಉಳ್ಳಾಲ ತಾಲೂಕಿನ ನರಿಂಗಾನ‌ ಗ್ರಾಮದ ಬೋಳ ನಿವಾಸಿ ರಾಬರ್ಟ್ ಕುಟಿನ್ಹ(79) ಬಾವಿಗೆ ಇಳಿದು ಪಾರಾದರೆ, ಅವರ ಪುತ್ರ ರಾಯಲ್ ಕುಟಿನ್ಹ(39) ಹೆಜ್ಜೇನು ದಾಳಿಗೆ ತುತ್ತಾಗಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.ಇದೇ ಸಂದರ್ಭ ಅಣ್ಣನ ಕೂಗು ಕೇಳಿ ಧಾವಿಸಿದ ರಾಬರ್ಟ್ ಕುಟಿನ್ಹ ಅವರ ಸಹೋದರ ಜೋಸೆಫ್ ಕುಟಿನ್ಹ ಅವರಿಗೂ ಗಾಯಗಳಾಗಿದ್ದು ಸದ್ಯ ಚೇತರಿಸಿಕೊಂಡಿದ್ದಾರೆ. ಜೋಸೆಫ್ ಕುಟಿನ್ಹ ಅವರ ಪುತ್ರ ಅಖಿಲ್ ಅವರಿಗೂ ಹೆಜ್ಜೇನು ಕಡಿದಿದೆ.

ದಾಳಿಯಿಂದ ತಡೆಯಲಾರದೆ ಕೂಗಿಕೊಂಡಾಗ ರಕ್ಷಣೆಗೆಂದು ಧಾವಿಸಿದ ಪುತ್ರ ರಾಯಲ್ ಹೆಜ್ಜೇನುಗಳು ಕಡಿದಿವೆ. ಮಗನ‌ ಸಹಾಯದಿಂದ ಮಹಡಿಯಿಂದ ಪವಾಡ ಸದೃಶ ಇಳಿದು ಪಾರಾದರೂ ಅವರಿಬ್ಬರ ಕೂಗು ಕೇಳಿದ ಜೋಸೆಫ್ ಕುಟಿನ್ಹ‌ ಹಾಗೂ ಅಖಿಲ್ ರಕ್ಷಣೆಗೆ ಧಾವಿಸಿದಾಗ ಅವರಿಗೂ ನೊಣಗಳು ಕಡಿದಿವೆ ಎಂದು ಹೇಳಲಾಗುತ್ತಿದೆ. ರಾಬರ್ಟ್ ಕುಟಿನ್ಹ ಅವರಿಗೆ ಸುಮಾರು ನೂರೈವತ್ತು ಕಡೆ ಗಾಯಗಳಾಗಿದ್ದು ಮಹಡಿಯಿಂದ ಇಳಿದರೂ ಹೆಜ್ಜೇನು ಅಟ್ಟಿಸಿಕೊಂಡು ಬಂದಿದೆ. ದಿಕ್ಕು ಕಾಣದೇ ಕಟ್ಟಕಡೆಗೆ ಸಮೀಪದ ಬಾವಿಗೆ ಇಳಿದು ನೀರಿನಲ್ಲಿ ಮುಳುಗಿ ಸುಮಾರು ಹೊತ್ತಿನ ಬಳಿಕ ಮೇಲೆದ್ದು ಬಂದು ಜೀವ ಉಳಿಸಿಕೊಂಡಿದ್ದಾರೆ. ಪುತ್ರ ರಾಯಲ್ ಗೂ ಸುಮಾರು ಇಪ್ಪತ್ತೆರಡು ಕಡೆ ಗಾಯಗಳಾಗಿದ್ದು ಮುಖ ನೋವಿನಿಂದ ಊದಿಕೊಂಡಿದೆ ಎಂದು ತಿಳಿದು ಬಂದಿದೆ. ಮನೆಯ ಸಿಟ್ ಔಟ್ ನಲ್ಲಿ ರಾಯಲ್ ಪತ್ನಿ ಹಾಗೂ ಮಗು ಕುಳಿತುಕೊಂಡಿದ್ದರೂ ಮನೆ ಮಂದಿ ಎಚ್ಚರಿಸಿದ ಕಾರಣ ಮನೆಯ ಕೊಠಡಿಯೊಳಗೆ ರಕ್ಷಣೆ ಪಡೆದಿದ್ದರು. ಕಿಟಕಿಗಳಿಗೆ ನೆಟ್ ಹಾಕಿದ್ದರಿಂದ ಅವರು ಅಪಾಯದಿಂದ ಪಾರಾಗಿದ್ದಾರೆಂದು ತಿಳಿದು ಬಂದಿದೆ. ಗಾಯಾಳುಗಳಿಗೆ ಚಿಕಿತ್ಸೆ ಮುಂದುವರಿದಿದೆ.

Related posts

ದಕ್ಷಿಣ ಕನ್ನಡ ಸೇರಿದಂತೆ 5 ರಾಜ್ಯಗಳ 14 ಸ್ಥಳಗಳಲ್ಲಿ ಏಕಕಾಲಕ್ಕೆ NIA ದಾಳಿ, PFI ಮಾಡಿದ ಆ ಪ್ಲಾನ್ ಬಹಿರಂಗಗೊಂಡಿದ್ದು ಹೇಗೆ..?

ರಾಷ್ಟ್ರೀಯ ಹೆದ್ದಾರಿ ಮೇಲೆ ಗುಡ್ಡ ಕುಸಿತದ ಭೀತಿ

ಭಟ್ಕಳದಲ್ಲಿ ನಾಲ್ವರ ಸಾಮೂಹಿಕ ಹತ್ಯೆ ಪ್ರಕರಣ ತನಿಖೆ ಚುರುಕು; ಇಬ್ಬರು ವಶಕ್ಕೆ