ನ್ಯೂಸ್ ನಾಟೌಟ್ : 30 ಅಡಿ ಕಂದಕಕ್ಕೆ ವಾಹನವೊಂದು ಉರುಳಿದ ಪರಿಣಾಮ ಭಾರಿ ಅವಘಡ ಸಂಭವಿಸಿದೆ.ಘಟನೆಯಲ್ಲಿ 8 ಜನ ಮಹಿಳೆಯರು ಸಾಸಾವನ್ನಪ್ಪಿದ್ದು,29 ಜನ ಗಾಯಗೊಂಡ ದಾರುಣ ಘಟನೆ ಪುಣೆಯಲ್ಲಿ ನಡೆದಿದೆ.
ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಸುಮಾರು 40 ಪ್ರಯಾಣಿಕರು ವ್ಯಾನ್ನಲ್ಲಿದ್ದರು ಎಂದು ತಿಳಿದು ಬಂದಿದೆ. ಇವರೆಲ್ಲ ಖೇಡ್ ತಹಸಿಲ್ನಲ್ಲಿರುವ ಶ್ರೀ ಕ್ಷೇತ್ರ ಮಹಾದೇವ ಕುಂದೇಶ್ವರ ದೇವಸ್ಥಾನಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ.
ಮೃತರು ಹಾಗೂ ಗಾಯಾಳುಗಳು ಪಾಪಲ್ವಾಡಿ ಗ್ರಾಮದವರಾಗಿದ್ದಾರೆ. ಶ್ರಾವಣ ಮಾಸದ ಶುಭ ಸೋಮವಾರದ ಪೂಜೆಗಾಗಿ ಅವರು ದೇವಾಲಯಕ್ಕೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಮಧ್ಯಾಹ್ನ 1 ಗಂಟೆ ಸುಮಾರಿಗೆ ಈ ಅಪಘಾತ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.