Latestಕ್ರೈಂಬೆಂಗಳೂರು

8 ವರ್ಷದ ಮಗಳನ್ನು ಬೆನ್ನಿಗೆ ಕಟ್ಟಿಕೊಂಡು ಕೃಷಿ ಹೊಂಡಕ್ಕೆ ಹಾರಿದ ತಾಯಿ..! ದೂರು ದಾಖಲು..!

70

ನ್ಯೂಸ್ ನಾಟೌಟ್: ಮಹಿಳೆಯೊಬ್ಬರು ತನ್ನ 8 ವರ್ಷದ ಮಗಳನ್ನು ಬೆನ್ನಿಗೆ ಕಟ್ಟಿಕೊಂಡು ಕೃಷಿ ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಹೊರವಲಯದಲ್ಲಿ, ವಿಶ್ವನಾಥಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಮೃತಪಟ್ಟ ಗೃಹಿಣಿ ಮಾಲಾ (30) ಮತ್ತು ಖಾಸಗಿ ಶಾಲೆಯಲ್ಲಿ 2 ನೇ ತರಗತಿ ವಿದ್ಯಾರ್ಥಿನಿಯಾಗಿರುವ ಕಿರಿಯ ಮಗಳು ಅನುಶ್ರೀ (8) ಎಂದು ಗುರುತಿಸಲಾಗಿದೆ. ಮಾಲಾ ಪತಿ ಮತ್ತು 10 ವರ್ಷದ ಮಗಳು ಬದುಕುಳಿದಿದ್ದಾರೆ.

ಮನೆಯಲ್ಲಿ ಆಸ್ತಿ ವಿವಾದದ ನಂತರ ಮಹಿಳೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತನಿಖೆಯಲ್ಲಿ ತಿಳಿದು ಬಂದಿದೆ. ಆಕೆಯ ಪತಿ ತನ್ನ ತಾಯಿ ಮತ್ತು ಸಹೋದರನೊಂದಿಗೆ ಚರ್ಚಿಸಿದ ನಂತರ 10 ಗುಂಟೆ ಭೂಮಿಯನ್ನು ಸಂಬಂಧಿಕರಿಗೆ ವರ್ಗಾಯಿಸಿದ್ದು. ಪತಿ ತನಗೆ ತಿಳಿಸದೆ ಆಸ್ತಿ ವರ್ಗಾವಣೆ ಮಾಡಿದ್ದರಿಂದ ಮಾಲಾ ಅಸಮಾಧಾನಗೊಂಡಿದ್ದರು, ಇದು ಜಗಳಕ್ಕೆ ಕಾರಣವಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಶನಿವಾರ(ಜೂ.21) ಬೆಳಿಗ್ಗೆ, ಮಾಲಾ ಮತ್ತು ಅನುಶ್ರೀ ಇಬ್ಬರೂ ಕಾಣೆಯಾಗಿರುವುದನ್ನು ಗಮನಿಸಿದ ಕುಟುಂಬ ಸದಸ್ಯರು ಅವರನ್ನು ಹುಡುಕಲು ಪ್ರಾರಂಭಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ. ನಂತರ ಕೃಷಿ ಹೊಂಡದಲ್ಲಿ ಅವರ ಶವಗಳು ತೇಲುತ್ತಿರುವುದನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದರು. ತಾಯಿಯ ಬನ್ನಿಗೆ ಮಗಳನ್ನು ಕಟ್ಟಲಾಗಿತ್ತು ಎಂದು ತಿಳಿದುಬಂದಿದೆ. ಮಹಿಳೆಯ ಕುಟುಂಬ ಸಲ್ಲಿಸಿದ ದೂರಿನ ಆಧಾರದ ಮೇಲೆ, ಆಕೆಯ ಪತಿಯ ವಿರುದ್ಧ ಬಿಎನ್‌ ಎಸ್‌ ನ ಸೆಕ್ಷನ್ 108 (ಆತ್ಮಹತ್ಯೆಗೆ ಪ್ರಚೋದನೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳಿಗೆ ಸೂಚನೆ ಕೊಟ್ಟು ಹಿಡಿಯದೆ ಓಡಿ ಹೋಗಲು ಅವಕಾಶ ಕೊಟ್ಟ ಇಬ್ಬರು ಪೊಲೀಸರು ಅಮಾನತ್ತು..! ಸಿಸಿಟಿವಿಯಲ್ಲಿ ದೃಶ್ಯ ಸೆರೆ..!

ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿ ಮುಂದುವರೆಯಬಾರದು ಎಂದ ಕುಮಾರ್ ಬಂಗಾರಪ್ಪ..! ಸ್ವಪಕ್ಷದಲ್ಲೇ ವಿಜಯೇಂದ್ರ ವಿರುದ್ಧ ಮತ್ತೆ ವಿರೋಧ..!

See also  ಪಾವಂಜೆ: ಭೀಕರ ರಸ್ತೆ ಅಪಘಾತ, 2 ಸಾವು, 1 ಗಾಯ
  Ad Widget   Ad Widget   Ad Widget   Ad Widget   Ad Widget   Ad Widget   Ad Widget   Ad Widget