Latestಉಡುಪಿಕರಾವಳಿ

ಇನ್ನು 9 ದಿನ ದಕ್ಷಿಣ ಕನ್ನಡ, ಉಡುಪಿ ಸೇರಿ ರಾಜ್ಯದ 15 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ..! ಚಂಡಮಾರುತದ ಪರಿಣಾಮ..!

1.4k

ನ್ಯೂಸ್ ನಾಟೌಟ್: ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಸೃಷ್ಟಿಯಾಗಿರುವುದರಿಂದಾಗಿ ರಾಜ್ಯದ ಮೇಲೆ ಪರಿಣಾಮ ಉಂಟಾಗಿದ್ದು, ಇಂದಿನಿಂದ ಏ.17 ವರೆಗೆ ಬೆಂಗಳೂರು ಸೇರಿ 15 ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಇನ್ನು ಉತ್ತರ ಒಳನಾಡಿನಲ್ಲಿ ಬೆಳಗಾವಿ, ಧಾರವಾಡ, ಹಾವೇರಿ, ಗದಗ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗಲಿದೆ.

ಇದರೊಂದಿಗೆ ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ದಾವಣಗೆರೆ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯಾಗಲಿದೆ ಎಂದು IMD ವರದಿ ಹೇಳಿದೆ.

ಚಂಡಮಾರುತದ ಪರಿಣಾಮವಾಗಿಯೇ ಮುಂಗಾರು ಪೂರ್ವ ಮಳೆ ಚುರುಕಾಗುತ್ತಿದ್ದು, ಒಂದು ವಾರ ಸಮೃದ್ಧ ಮಳೆಯಾಗಲಿದೆ ಎಂದು ತಿಳಿದುಬಂದಿದೆ. ಈ ಮಧ್ಯೆ ಕಲಬುರಗಿ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಬಿಸಿಲ ಝಳವೂ ಹೆಚ್ಚಾಗಿದೆ.

ಶಬರಿಮಲೆಯ ಪಂಬ ಸನ್ನಿಧಿಯಲ್ಲಿ ಬಂಟ್ವಾಳದ ಶಿಕ್ಷಕ ಸಾವು..! ಕುಸಿದು ಬಿದ್ದು ಮೃತ..!

ಫ್ರಾನ್ಸ್ ನಿಂದ 63,000 ಕೋಟಿ ರೂಪಾಯಿಯ 26 ರಫೇಲ್ ಯುದ್ಧ ವಿಮಾನ ಖರೀದಿ..! ಭಾರತದ ಸಾಗರ ಗಡಿಗಳನ್ನು ಕಾಯಲು ಗಡಿದಾಟಿ ಬಂದ ವೀರರು..!

See also  ಸುಬ್ರಹ್ಮಣ್ಯ:ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು,ಎರಡು ಕಾರು ಜಖಂ
  Ad Widget   Ad Widget   Ad Widget   Ad Widget   Ad Widget   Ad Widget   Ad Widget