ನ್ಯೂಸ್ ನಾಟೌಟ್: ನಿನ್ನೆ(ಎ.14) ಜ್ಞಾನೇಶ್ವರ್ ಎಂಬಾತ ತನ್ನ 9 ತಿಂಗಳ ಗರ್ಭಿಣಿಯಾಗಿದ್ದ 27 ವರ್ಷದ ಪತ್ನಿ ಅನುಷಾಳನ್ನ ಕೊಂದ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣಂನ ಪಿಎಂ ಪಾಲೆಮ್ ನ ಉಡಾ ಕಾಲೋನಿಯಲ್ಲಿ ನಡೆದಿದೆ.
ಅನುಷಾ ಮತ್ತು ಆಕೆಯ ಪತಿ ಜ್ಞಾನೇಶ್ವರ್ ಸಣ್ಣ ವಿಷಯಕ್ಕೆ ಜಗಳವಾಡಿದ್ದರು. ಇದೇ ಭಾನುವಾರ(ಎ.13) ವೈದ್ಯರು ಅನುಷಾಳಿಗೆ ಹೆರಿಗೆಗೆ ಆಸ್ಪತ್ರೆಗೆ ಬರಲು ಸೂಚಿಸಿದ್ದರು.
ಜ್ಞಾನೇಶ್ವರ್ ಸೋಮವಾರ ಅಡ್ಮಿಟ್ ಆಗೋಣ ಎಂದು ಹಠ ಹಿಡಿದಿದ್ದ. ಇದೇ ವಿಚಾರಕ್ಕೆ ಜಗಳ ಹೆಚ್ಚಾಗಿ ಕೋಪದಲ್ಲಿ ಆತ ಆಕೆಯ ಕತ್ತು ಹಿಸುಕಿದ್ದು, ಇದರಿಂದಾಗಿ ಆಕೆ ಪ್ರಜ್ಞಾಹೀನಳಾಗಿ ಬಿದ್ದಿದ್ದಾಳೆ. ಕತ್ತು ಹಿಸುಕಿದ ಬಳಿಕ, ಅನುಷಾ ಮನೆಯವರಿಗೆ ಫೋನ್ ಮಾಡಿ ಆಕೆಗೆ ಹುಷಾರಿಲ್ಲ ಎಂದು ಹೇಳಿದ್ದ. ತಕ್ಷಣ ಬಂದ ಆಕೆಯ ಪೋಷಕರು ಆಕೆಯನ್ನ ಆಸ್ಪತ್ರೆಗೆ ಸೇರಿಸಿದ್ರು. ಅಲ್ಲಿ ಆಕೆ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಈ ಬೆನ್ನಲ್ಲೇ ಜ್ಞಾನೇಶ್ವರ್ ವರ್ತನೆಯಿಂದ ಅನುಮಾನಗೊಂಡ ಪೊಲೀಸರು ಆತನನ್ನ ವಿಚಾರಣೆ ಮಾಡಿದಾಗ ಕೊಲೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆ. ಪತ್ನಿಯನ್ನು ತಾನೇ ಕತ್ತು ಹಿಸುಕಿ ಕೊಂದಿದ್ದಾಗಿ ಬಾಯ್ಬಿಟ್ಟಿದ್ದಾನೆ. ಕೊಲೆಯ ಹಿಂದಿನ ಉದ್ದೇಶದ ಬಗ್ಗೆ ನೈಜ್ಯ ಕಾರಣ ಸಂಪೂರ್ಣ ತನಿಖೆಯ ಬಳಿಕ ತಿಳಿಯಬೇಕಿದೆ.
ಆಟವಾಡುತ್ತಾ ಕಾರಿನೊಳಗೆ ಹೋದ ಬಾಲಕಿಯರು ಉಸಿರುಗಟ್ಟಿ ಸಾವು..! ಮದುವೆಗೆ ಬಂದಿದ್ದ ವೇಳೆ ಘಟನೆ..!