ಕ್ರೈಂಬೆಂಗಳೂರುವೈರಲ್ ನ್ಯೂಸ್

ಕೆಲವೇ ಸೆಕೆಂಡ್​ನಲ್ಲಿ ಲಕ್ಷಾಧಿಪತಿಯಾದ ಯುವಕನಿಗೆ 94 ಲಕ್ಷ ಸಿಕ್ಕಿದ್ದು ಹೇಗೆ? ಹೀರೋ ಆಗಬೇಕಿದ್ದವ ಆ ಒಂದು ನಿರ್ಧಾರದಿಂದ ಆರೋಪಿಯಾಗಿದ್ದು ಹೇಗೆ? ಇಲ್ಲಿದೆ ಇಂಟ್ರೆಸ್ಟಿಂಗ್ ಕಹಾನಿ!

172

ನ್ಯೂಸ್ ನಾಟೌಟ್ : ಇಲ್ಲೊಬ್ಬ ಯುವಕ ಕೇವಲ ಹತ್ತೇ ಹತ್ತು ಸೆಕೆಂಡ್​ನಲ್ಲಿ ಯಾವ ಪರಿಶ್ರಮವೂ ಇಲ್ಲದೆ ಲಕ್ಷಾಧಿಪತಿಯಾಗಿಬಿಟ್ಟಿದ್ದ. ಆದರೆ ಈಗ ಪೊಲೀಸರ ಅತಿಥಿಯಾಗಿದ್ದಾನೆ. ಸ್ವಲ್ಪ ಯೋಜಿಸಿದ್ದರೆ ಬೆಂಗಳೂರು ಜನರ ಕಣ್ಣಿಗೆ ಹೀರೋ ಆಗಬಹುದಿತ್ತು. ಯುವಕನ ಒಂದು ತಪ್ಪು ನಿರ್ಧಾರದಿಂದ ಕಂಬಿ ಹಿಂದೆ ಕೂರುವಂತೆ ಮಾಡಿದೆ.

ಹೌದು ಬರಿಗೈಯಲ್ಲಿ ಬಂದವನಿಗೆ ಬರೋಬ್ಬರಿ 94 ಲಕ್ಷ ಹಣ ಸಿಕ್ಕಿದೆ. ಹಣ ಸಿಕ್ಕಿದ್ದೇ ತಡ, ಏನು ಮಾಡಬೇಕು ಅನ್ನೋ ಗೊಂದಲದಲ್ಲೇ ಹಣವನ್ನು ಮನೆಯಲ್ಲಿಟ್ಟುಕೊಂಡು ಯುವಕ 6 ದಿನ ಕಳೆದಿದ್ದ. ಆದರೆ 300ಕ್ಕೂ ಹೆಚ್ಚು ಸಿಸಿ ಕ್ಯಾಮರಾ ಪರಿಶೀಲಿಸಿ ಪ್ರಕರಣ ಬೇಧಿಸಿದ ಚಂದ್ರ ಲೇಔಟ್ ಪೊಲೀಸರು ಯುವಕನನ್ನು ಬಂಧಿಸಿದ್ದಾರೆ.

ನಗರದ ಚಂದ್ರ ಲೇಔಟ್ ನಿವಾಸಿಯಾಗಿರುವ ಪ್ರಮೋದ್ ಸೈಟ್ ಖರೀದಿಸಲು 94 ಲಕ್ಷ ರೂ. ಹಣ ಕೂಡಿಸಿಟ್ಟಿದ್ದ. ಅದನ್ನ ತನ್ನ ಸ್ನೇಹಿತನ ಅಂಗಡಿಯಲ್ಲಿ ಎಣಿಸಿ ನಂತರ ವಕೀಲರ ಕಚೇರಿಗೆ ಹೋಗಿ ಸೈಟ್ ಖರೀದಿಸಲು ಬೇಕಾದ ವ್ಯವಸ್ಥೆ ಮಾಡಿಕೊಳ್ಳೋಣ ಎಂದು ಬ್ಯಾಗ್​ನಲ್ಲಿ ಡಾಕ್ಯುಮೆಂಟ್ಸ್ ಇಟ್ಟು, ಬಾಕ್ಸ್​ನಲ್ಲಿ ಎಲ್ಲಾ ಹಣವನ್ನು ತುಂಬಿಸಿ ಹಣದ ಬಾಕ್ಸ್ ಅನ್ನು ತಂದು ಕಾರಿನಲ್ಲಿ ಇಡಲು ಮುಂದಾಗಿದ್ದರು. ಕಾರಿನ ಡೋರ್ ಓಪನ್ ಮಾಡಬೇಕಿತ್ತು, ಹಾಗಾಗಿ ಕೈನಲ್ಲಿದ್ದ ಹಣವನ್ನು ಅಪರಿಚಿತರ ಆ್ಯಕ್ಟಿವಾ ಬೈಕ್ ಮೇಲಿಟ್ಟಿದ್ದಾರೆ.

ಬಳಿಕ ಕಾರ್ ಡೋರ್ ಓಪನ್ ಮಾಡಿ ಸೈಟ್ ಖರೀದಿಗೆ ಬೇಕಿದ್ದ ದಾಖಲಾತಿ ಇದ್ದ ಬ್ಯಾಗನ್ನು ಮಾತ್ರ ಕಾರಿನಲ್ಲಿ ಹಾಕಿಕೊಂಡು, ಹಣವನ್ನು ಅಲ್ಲೇ ಮರೆತು ಪ್ರಮೋದ್ ತಮ್ಮ ಸ್ನೇಹಿತನ ಅಂಗಡಿಗೆ ಹೊರಟಿದ್ದಾರೆ.

ಮತ್ತೊಂದೆಡೆ ಪ್ರಮೋದ್ ಕಾರು ಹೊರಡುತ್ತಿದ್ದಂತೆ ಅದೇ ರಸ್ತೆಯಲ್ಲಿ ಬಂದ ವರುಣ್ ಎಂಬ ಯುವಕ ಪಾರ್ಕ್ ಮಾಡಿದ್ದ ತನ್ನ ಬೈಕ್​ ಎತ್ತಲು ಮುಂದಾಗಿದ್ದಾನೆ. ಈ ವೇಳೆ ಬೈಕ್ ಮೇಲೆ ಒಂದು ಬಾಕ್ಸ್ ಸಿಕಿದ್ದು ಅದನ್ನು ತೆರೆದು ನೋಡಿದಾಗ ಕಂತೆ ಕಂತೆ ಹಣ ಸಿಕ್ಕಿದೆ. ಹಣ ನೋಡುತ್ತಿದ್ದಂತೆ ವರುಣ್ ಹಣದ ಸಮೇತ ಸ್ಥಳದಿಂದ ಕಾಲ್ಕಿತ್ತಿದ್ದಾನೆ. ಖಾಸಗಿ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಡಿಪಾರ್ಟ್ ಮೆಂಟ್​ನಲ್ಲಿ ಕೆಲಸ ಮಾಡುವ ವರುಣ್ ತನ್ನ ಶ್ರೀನಗರ ಮನೆಯಲ್ಲಿ ಹಣವನ್ನ ಬಚ್ಚಿಟ್ಟಿದ್ದಾನೆ.

94 ಲಕ್ಷ ರೂ. ಹಣ ಏನು ಮಾಡಬೇಕು ಎನ್ನುವ ಗೊಂದಲದಲ್ಲೇ ಐದು ದಿನ ಕಳೆದಿದ್ದಾನೆ. ಜೊತೆಗೆ ಸೆಕೆಂಡ್ ಹ್ಯಾಂಡ್ ಇನ್ನೋವಾ ಕಾರು ಖರೀದಿಸಲು ಪ್ಲಾನ್ ಮಾಡ್ಕೊಂಡಿದ್ದಾನೆ. ಆದರೆ ಎಲ್ಲಿಯೂ ಹಣ ಖರ್ಚು ಮಾಡದೇ ಮನೆಯಲ್ಲಿ ಬಚ್ಚಿಟ್ಟಿದ್ದ.

ಇದನ್ನೂ ಓದಿ: ಏನಿದು 35 ಕೋಟಿಯ ಇಂದಿರಾ ಕ್ಯಾಂಟೀನ್ ಬಿಲ್ ಷಡ್ಯಂತ್ರ? ಬಂಧನವಾಗುತ್ತಿದಂತೆ ಹಿಂದೂ ಹೋರಾಟಗಾರ್ತಿ ಬಿಚ್ಚಿಟ್ಟ ರಹಸ್ಯವೇನು?

ಇನ್ನು ಸ್ನೇಹಿತನ ಅಂಗಡಿಗೆ ಹೋಗಿ ಕಾರು ಪರಿಶೀಲಿಸಿದ ಪ್ರಮೋದ್​ಗೆ ಶಾಕ್ ಆಗಿದೆ. ಪ್ರಮೋದ್ ವಾಪಸ್ಸು ಬಂದು ನೋಡಿದಾಗ ಬೈಕ್ ಹಾಗೂ ಹಣ ಎರಡೂ ಇರಲಿಲ್ಲ. ತಕ್ಷಣ ಪ್ರಮೋದ್ ಚಂದ್ರ ಲೇಔಟ್ ಪೊಲೀಸ್ ಠಾಣೆಗೆ ಬಂದು ದೂರು ದಾಖಲಿಸಿದ್ದಾರೆ. ಪೊಲೀಸರ ಸತತ ಕಾರ್ಯಾಚರಣೆಯ ಬಳಿಕ ಹಣ ಸಿಕ್ಕಿದ್ದು, ಯುವಕ ಆರೋಪಿ ಎಂಬಂತಾಗಿದೆ.

See also  ಸುಬ್ರಹ್ಮಣ್ಯ: ವಿವಾಹಿತ ಮಹಿಳೆಯನ್ನು ಲೈಂಗಿಕವಾಗಿ ಬಳಸಿಕೊಂಡು ಬ್ಲ್ಯಾಕ್ ಮೇಲ್..! ನಗ್ನ ವಿಡಿಯೋ ಚಿತ್ರೀಕರಿಸಿ ಲಕ್ಷ..ಲಕ್ಷಕ್ಕೆ ಬೇಡಿಕೆ ಇಟ್ಟವ ಸಿಕ್ಕಿಬಿದ್ದಿದ್ದು ಹೇಗೆ..?
  Ad Widget   Ad Widget   Ad Widget   Ad Widget   Ad Widget   Ad Widget   Ad Widget   Ad Widget