ನ್ಯೂಸ್ ನಾಟೌಟ್: ಮಡಿಕೇರಿ ತಾಲೂಕು ಮದೆನಾಡು ಗ್ರಾಮದ ದೇವರಕೊಲ್ಲಿಯಲ್ಲಿ ನೆಲೆಯಾಗಿರುವ ಶ್ರೀ ಚಾಮುಂಡೇಶ್ವರಿ ಸನ್ನಿಧಾನದಲ್ಲಿ ನವರಾತ್ರಿ ಉತ್ಸವಕ್ಕೆ ಸಿದ್ಧತೆ ಆರಂಭಗೊಂಡಿದೆ.
ದಿನಾಂಕ 26.09.2022 ರಿಂದ 04.10.2022 ರವರೆಗೆ ವಿವಿಧ ಧಾರ್ಮಿಕ ವೈದಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿವೆ. 26.09.2022 ರಂದು ಕಾರ್ಯಕ್ರಮದ ಉದ್ಘಾಟನೆ ಮತ್ತು ಧಾರ್ಮಿಕ ಉಪನ್ಯಾಸ ನಡೆಯಲಿದೆ. ಪ್ರತಿ ದಿನ ಸಂಜೆ ಭಜನೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದೆ. ನಂತರ ಅನ್ನ ಸಂತರ್ಪಣೆ ನೆರವೇರಲಿದೆ. 04.10.2022 ರಂದು ಆಯುಧ ಪೂಜೆ ಮತ್ತು ವಿಶೇಷ ಕಾರ್ಯಕ್ರಮಗಳು ಜರುಗಲಿದೆ ಮತ್ತು ಅದೇ ದಿನ ಧಾರ್ಮಿಕ ಸಭೆ ನಡೆಯಲಿದೆ. ಈ ದಿನ ಮಧ್ಯಾಹ್ನ ಮತ್ತು ರಾತ್ರಿ ಅನ್ನ ಸಂತರ್ಪಣೆ ಇರುತ್ತದೆ.
ಭಕ್ತಾದಿಗಳು ಶ್ರೀ ದೇವಿಗೆ ವಿಶೇಷ ಪೂಜೆ. ಸೇವೆ ಮಾಡಿಸಲು ಇಚ್ಚಿಸುವವರು ಸಮಿತಿಗೆ ಮೊದಲೇ ತಿಳಿಸಿದ್ದಲ್ಲಿ ಭಕ್ತರು ನಿರೀಕ್ಷಿಸಿದ ಸೇವೆಯನ್ನು ನೆರವೇರಿಸಲು ಅವಕಾಶ ಇದೆ. ನವರಾತ್ರಿಯ ಆಹ್ವಾನವನ್ನು ಸಾಧ್ಯವಾದಷ್ಟು ಮಟ್ಟಿಗೆ ತಲುಪಿಸಲು ಪ್ರಯತ್ನಿಸಿದ್ದೇವೆ. ದೊರೆಯದವರು ಇದನ್ನೇ ಆಹ್ವಾನ ಎಂದು ಪರಿಗಣಿಸಿ ನವರಾತ್ರಿಯ ಕಾರ್ಯಕ್ರಮದಲ್ಲಿ ಭಾಗವಹಿಸಿ ನಮ್ಮೊಂದಿಗೆ ಸಹಕರಿಸಿ ಶ್ರೀ ದೇವಿಯ ಕೃಪೆಗೆ ಪಾತ್ರರಾಗ ಬೇಕಾಗಿ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಮತ್ತು ಸರ್ವ ಸದಸ್ಯರು ಶ್ರೀ ಚಾಮುಂಡೇಶ್ವರಿ ದೇವಸ್ಥಾನ ದೇವರ ಕೊಲ್ಲಿ ದೇವಸ್ಥಾನ ಮನವಿ ಮಾಡಿದ್ದಾರೆ.