ನ್ಯೂಸ್ ನಾಟೌಟ್: ಸುಳ್ಯದ ಗಾಂಧಿನಗರದ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಶಾಲಾ ಮಕ್ಕಳಿಗಾಗಿ ಶುದ್ಧ ಕುಡಿಯುವ ನೀರಿನ ಘಟಕವನ್ನು ತೆರೆಯಲಾಗಿದೆ. ಈ ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮ ಅ.30ರಂದು ನಡೆಯಿತು. ಎ.ಜೆ ಆಸ್ಪತ್ರೆ ಮಂಗಳೂರು ಇದರ ವತಿಯಿಂದ ಕೊಡ ಮಾಡಿದ ಶುದ್ಧ ಕುಡಿಯುವ ನೀರಿನ ಘಟಕವನ್ನು ಸಮುದಾಯದತ್ತ ಶಾಲಾ ಕಾರ್ಯಕ್ರಮದ ವೇಳೆ ಉದ್ಘಾಟನೆ ನಡೆಸಲಾಯಿತು.

ನೀರಿನ ಘಟಕವನ್ನು ಕೊಡುಗೆಯಾಗಿ ನೀಡುವಲ್ಲಿ ಸಹಕಾರ ನೀಡಿದ ಕಾರ್ತಿಕ್ ಮತ್ತು ಸಹಕಾರ ನೀಡಿದ ರಝಾಕ್ (ಅಚ್ಚು ಪ್ರಗತಿ) ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚಿದಾನಂದ ಕುದ್ಪಾಜೆ, ಪ್ರಾಂಶುಪಾಲೆ ಪರಮೇಶ್ವರಿ, ಎಸ್ ಡಿ ಎಂಸಿ ಸದಸ್ಯ ವಿಜಯ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.













