27.7 C
Sullia
Sunday, March 8, 2026

ಉಪ್ಪಿನಂಗಡಿ: ಮನೆಯೊಳಗೆ ಮಲಗಿದ್ದ ಮೂವರು ಮಕ್ಕಳಿಗೆ ಮಧ್ಯರಾತ್ರಿ ಕಡಿದ ವಿಷದ ಹಾವು..! ಸಕಾಲಕ್ಕೆ ಸ್ಪಂದಿಸಿ ಮಕ್ಕಳ ಜೀವ ಉಳಿಸಿದ ನಾಟಿ ವೈದ್ಯ

ನ್ಯೂಸ್ ನಾಟೌಟ್: ಮನೆಯೊಳಗೆ ಮಲಗಿದ್ದ ಮೂವರು ಮಕ್ಕಳಿಗೆ ವಿಷಪೂರಿತ ಹಾವೊಂದು ಕಡಿದ ಘಟನೆ ಶನಿವಾರ ರಾತ್ರಿ ಬೆಳ್ತಂಗಡಿ ತಾಲೂಕಿನ ತಣ್ಣೀರುಪಂತ ಸಮೀಪದ ಕುದ್ರಡ್ಕದಲ್ಲಿ ಸಂಭವಿಸಿದೆ. ತಡರಾತ್ರಿ ಆಸ್ಪತ್ರೆಗೆ ಕರೆದೊಯ್ಯಲು ಯಾವುದೇ ವಾಹನ ಸಿಗದಿದ್ದಾಗ ನಾಟಿವೈದ್ಯರೊಬ್ಬರ ಸಕಾಲಿಕ ನೆರವಿನಿಂದ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಕುದ್ರಡ್ಕ ನಿವಾಸಿ ವಿಜಯ ಮಡೆಕ್ಕಿಲ ಅವರ ಮಗ ದಕ್ಷಿತ್ ಮತ್ತು ಅಕ್ಕನ ಮಕ್ಕಳಾದ ವಿಶ್ಮಿತಾ ಹಾಗೂ ಅನ್ವಿತಾ ಒಂದೇ ಕೋಣೆಯಲ್ಲಿ ಮಲಗಿದ್ದು, ರಾತ್ರಿ 11.30ರ ಸುಮಾರಿಗೆ ಕೋಣೆಯೊಳಗೆ ಪ್ರವೇಶಿಸಿದ ವಿಷಪೂರಿತ ಕನ್ನಡಿ ಹಾವು ದಕ್ಷಿತ್ ನ ಎರಡೂ ಕೈಗಳಿಗೆ ಕಚ್ಚಿತು. ಬಳಿಕ ವಿಶ್ಮಿತಾ ಹಾಗೂ ಅನ್ವಿತಾ ಅವರ ಕೈಗೂ ಕಚ್ಚಿದ್ದು ಮಕ್ಕಳು ಭೀತಿಯಿಂದ ಕಂಗೆಟ್ಟಿದ್ದರು.

ತಕ್ಷಣ ಮಕ್ಕಳನ್ನು ಆಸ್ಪತ್ರೆಗೆ ಕರೆದೊಯ್ಯುವ ಅನಿವಾರ್ಯ ಇದ್ದರೂ ಉಪ್ಪಿನಂಗಡಿಯನ್ನು ಸಂಪರ್ಕಿಸುವ ಗುರುವಾಯನಕೆರೆ – ಉಪ್ಪಿನಂಗಡಿ ರಸ್ತೆಯ ದುಃಸ್ಥಿತಿಯಿಂದಾಗಿ ಆಸ್ಪತ್ರೆ ತಲುಪುವುದು ವಿಳಂಬವಾಗಿ ಪ್ರಾಣಾಪಾಯವಾಗುವ ಸಾಧ್ಯತೆ ಇರುವುದರಿಂದ ಕಂಗೆಟ್ಟ ಮನೆಯವರು ತಣ್ಣೀರುಪಂತ ಗ್ರಾಮದಲ್ಲಿನ ನಾಟಿ ವೈದ್ಯ ಸೂರಪ್ಪ ಪೂಜಾರಿ ಅವರ ಮನೆ ಬಾಗಿಲು ತಟ್ಟಿದ್ದರು. ಮಧ್ಯರಾತ್ರಿ ಹಾವು ಕಡಿತಕ್ಕೊಳಗಾಗಿ ಮನೆಗೆ ಬಂದ ಮೂವರು ಮಕ್ಕಳಿಗೆ ಪ್ರಾಥಮಿಕ ಚಿಕಿತ್ಸೆ ನೀಡಿದ ನಾಟಿವೈದ್ಯ ಸೂರಪ್ಪ ಪೂಜಾರಿ (77) ಅವರು ತಾವು ಪರಂಪರಾಗತವಾಗಿ ಅರಿತುಕೊಂಡಿರುವ ಔಷಧವನ್ನು ಮಕ್ಕಳಿಗೆ ನೀಡಿ ಅಪಾಯದಿಂದ ಪಾರು ಮಾಡಿದ್ದಾರೆ.

Related Articles

LEAVE A REPLY

Please enter your comment!
Please enter your name here

Latest Articles