27.7 C
Sullia
Sunday, March 8, 2026

ದೆಹಲಿ ಬ್ಲಾಸ್ಟ್ : ತುಮಕೂರಿನಲ್ಲಿ ಮಾಜಿ ಉಗ್ರನ ವಿಚಾರಣೆ

ನ್ಯೂಸ್ ನಾಟೌಟ್ :ದೆಹಲಿ ಕಾರ್ ಬಾಂಬ್ ಬ್ಲಾಸ್ಟ್‌ಗೆ ಸಂಬಂಧಿಸಿದಂತೆ ತುಮಕೂರಿನಲ್ಲಿ (Tumakuru) ಮಾಜಿ ಉಗ್ರನನ್ನು ವಿಚಾರಣೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ದೆಹಲಿಯ ಕೆಂಪುಕೋಟೆಯ ಬಳಿ ಸಂಭವಿಸಿದ್ದ ಕಾರು ಸ್ಫೋಟ ಸಂಬಂಧ ಎನ್‌ಐಎ ತೀವ್ರ ವಿಚಾರಣೆ ನಡೆಸುತ್ತಿದ್ದು,ಈ ಹಿನ್ನೆಲೆ ಹೈ ಅಲರ್ಟ್ ಘೋಷಿಸಲಾಗಿದ್ದು, ಇತ್ತ ಕರ್ನಾಟಕದ ತುಮಕೂರು ಜಿಲ್ಲೆಯಲ್ಲಿ ಮಾಜಿ ಉಗ್ರ ಮುಜಾಹಿದ್ಧೀನ್ ಎಂಬಾತನನ್ನು ಎಎಸ್ಪಿ ಪುರುಷೋತ್ತಮ ನೇತೃತ್ವದಲ್ಲಿ ತಿಲಕ್ ಪಾರ್ಕ್ ಪೊಲೀಸರು ವಿಚಾರಣೆ ಮಾಡಿದ್ದಾರೆ.

ಮಾಜಿ ಉಗ್ರನನ್ನು 2016ರಲ್ಲಿ ಎನ್‌ಐಎ ಅಧಿಕಾರಿಗಳು ಬಂಧಿಸಿದ್ದರು. 6 ವರ್ಷಗಳ ಕಾಲ ಈತ ತಿಹಾರ್ ಜೈಲಿನಲ್ಲಿದ್ದ . ಕಲಿಫತ್ ಉಗ್ರ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ಈತ, ಸಂಘಟನೆ ಮುಖಂಡರಿಗೆ ತುಮಕೂರಿನಲ್ಲಿ ಸಭೆಗೆ ಅವಕಾಶ ಮಾಡಿ, ಅದರ ಚಟುವಟಿಕೆಯಲ್ಲಿ ಭಾಗಿಯಾಗಿದ್ದ ಎಂದು ತಿಳಿದುಬಂದಿದೆ.

ಸದ್ಯ ದೆಹಲಿ ಪ್ರಕರಣ ಸಂಬಂಧ ಉಗ್ರನ ವಿಚಾರಣೆ ಮಾಡಲಾಗಿದೆ. ಪ್ರಕರಣದಲ್ಲಿ ಈತನ ಪಾತ್ರವಿಲ್ಲ ಎಂದು ತಿಳಿದುಬಂದಿದ್ದು, ಬಿಟ್ಟುಕಳುಹಿಸಿದ್ದಾರೆ

Related Articles

LEAVE A REPLY

Please enter your comment!
Please enter your name here

Latest Articles