ನ್ಯೂಸ್ ನಾಟೌಟ್ :ಚಿರತೆ ದಾಳಿಗೆ 5 ವರ್ಷದ ಮಗು ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ಚಿಕ್ಕಮಗಳೂರಿನ ತರೀಕೆರೆ ತಾಲೂಕಿನ ಮುಂಡ್ರೆ ಸಮೀಪದ ನವಿಲೇಕಲ್ ಗುಡ್ಡ ಗ್ರಾಮದಲ್ಲಿ ಗುರುವಾರ(ನ.20) ಸಂಜೆ ನಡೆದಿದೆ.
ಮೃತ ಮಗುವನ್ನು 5 ವರ್ಷದ ಸಾನ್ವಿ ಎಂದು ಗುರುತಿಸಲಾಗಿದೆ.ಮನೆಯ ಹಿಂದಿನ ಕೊಟ್ಟಿಗೆಯ ಬಳಿ ಮಗು ಇತ್ತು. ಈ ವೇಳೆ ಏಕಾಏಕಿ ದಾಳಿ ನಡೆಸಿದೆ.ಮಗು ಕೂಗುತ್ತಿದ್ದಂತೆ ಓಡಿ ಬಂದ ಮನೆಯವರನ್ನು ಕಂಡ ಚಿರತೆ, ಮಗುವನ್ನು ಕಾಡಿನತ್ತ ಎಳೆದುಕೊಂಡು ಹೋಗಿದೆ. ಸ್ಥಳೀಯರು ಹುಡುಕಾಡಿದಾಗ ಕಾಡಂಚಿನಲ್ಲಿ ಮಗುವಿನ ಮೃತದೇಹ ಪತ್ತೆಯಾಗಿದೆ.
ಈ ಕುರಿತು ಬೀರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.













