ನ್ಯೂಸ್ ನಾಟೌಟ್: ಮಂಗಳೂರಿನ ವಿದ್ಯಾರ್ಥಿಯೊಬ್ಬ ಜಲಪಾತ ವೀಕ್ಷಣೆಗಾಗಿ ಹೋದವರು ಮೋಜು- ಮಸ್ತಿ ನೀರುಪಾಲಾಗಿ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಸಳ್ಳಿ ಫಾಲ್ಸ್ನಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿಯು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಎ.ಎಸ್.ಐ ಕುಮಾರ ಶೆಟ್ಟಿ ಎಂಬವರ ಮಗ ಚಿರಾಂತ್ ಶೆಟ್ಟಿ(20) ಎಂದು ತಿಳಿದುಬಂದಿದ್ದು, ಮಂಗಳೂರಿನ ಬಲ್ಲಾಳ ಭಾಗ್ ನ ಶ್ರೀದೇವಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿಕಾಂ ವ್ಯಾಸಂಗ ಮಾಡುತ್ತಿದ್ದ ಎನ್ನಲಾಗಿದೆ.
ಗುಡ್ ಪ್ರೈಡೆ ರಜೆ ಕಳೆಯಲು ತನ್ನ ಸ್ನೇಹಿತನ ಮನೆಗೆ ತೆರಳಿದ್ದ ಈತ ತನ್ನ ತರಗತಿಯ ಅಕ್ಷಯ್ ಆಚಾರಿ (20) ರವರ ಮನೆಗೆ ಆಲ್ವಿನ್, ಧರಣ್, ರೆಯಾನ್ ಹಾಗೂ ಪಿಜಿಮೆಟ್ ಬೈಂದೂರಿನ ಕಿರ್ತನ್ ದೇವಾಡಿಗ (20) ಎಮಬ ಸ್ನೇಹಿತರೊಂದಿಗೆ ಬೈಂದೂರಿನ ಸ್ನೇಹಿತನ ಮನೆಯಲ್ಲಿ ಗುರುವಾರ ರಾತ್ರಿ ತಂಗಿದ್ದರು.
ಶುಕ್ರವಾರ ಮಧ್ಯಾಹ್ನ ದ ವೇಳೆ ಊಟ ಮುಗಿಸಿ, ಮೊಜು ಮಸ್ತಿ ಮಾಡಲು ಸುಮಾರು 3.30ರ ಹೊತ್ತಿನಲ್ಲಿ ಬೈಕ್ ನಲ್ಲಿ ಕೊಸಳ್ಳಿ ಪಾಲ್ಸ್ ಗೆ ಹೋಗಿದ್ದು, ಚಿರಾಂತ್ ಶೆಟ್ಟಿ ಹೊರತು ಪಡಿಸಿ ಉಳಿದವರಿಗೆ ಈಜು ಬರದೇ ಇರುವುದರಿಂದ ನೀರಿಗೆ ಇಳಿಯದೇ ದಡದಲ್ಲಿ ಕುಳಿತಿದ್ದರು ಎನ್ನಲಾಗಿದೆ. ನೀರಿಗಿಳಿದ ಚಿರಾಂತ್ ಶೆಟ್ಟಿ ಮುಳುಗಿ ನಾಪತ್ತೆಯಾಗಿದ್ದು, ಈ ಬಗ್ಗೆ ಮಾಹಿತಿ ತಿಳಿದು ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿಗಳು ಮೃತದೇಹವನ್ನು ಪತ್ತೆಹಚ್ಚಿದ್ದಾರೆ. ಈ ಬಗ್ಗೆ ಉಡುಪಿ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.