ನ್ಯೂಸ್ ನಾಟೌಟ್ : ಇಡೀ ಸುಳ್ಯವನ್ನೇ ಬೆಚ್ಚಿ ಬೀಳಿಸುವಂತೆ ಮಾಡಿದ್ದ ಕಲ್ಲುಗುಂಡಿಯ ಸಂಪತ್ ಕೊಲೆ ಪ್ರಕರಣದ ಮೂರನೇ ಆರೋಪಿಗೆ ಮಂಗಳೂರಿನ ಐದನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಷರತ್ತು ಬದ್ಧ ಜಾಮೀನು ನೀಡಿದೆ.
ಸುಳ್ಯದ ಶಾಂತಿನಗರದಲ್ಲಿ ಬಿಜೆಪಿ ನಾಯಕ ಬಾಲಚಂದ್ರ ಕಳಗಿ ಹತ್ಯೆ ಆರೋಪಿ ಸಂಪತ್ ಹತ್ಯೆ 2020 ರ ಅಕ್ಟೋಬರ್ 8 ರಂದು ನಡೆದಿತ್ತು.ಕಲ್ಲುಗುಂಡಿಯ ಸಂಪತ್ ಎಂಬವರು ಸುಳ್ಯ ಶಾಂತಿನಗರದ ಅವರ ಬಾಡಿಗೆ ಮನೆಯಿಂದ ಕಾರಿನಲ್ಲಿ ಬರುತ್ತಿದ್ದಾಗ ಅವರನ್ನು ಅಟ್ಟಾಡಿಸಿಕೊಂಡು ಹೋಗಿ ಮನೆಯೊಂದರಲ್ಲಿ ಕಡಿದು ಕೊಲೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧ ಪಟ್ಟ ಹಾಗೆ ಪೊಲೀಸರು 8 ಮಂದಿಯನ್ನು ಬಂಧಿಸಿದ್ದರು.ಪ್ರಕರಣದ ಮೂರನೇ ಆರೋಪಿಯಾಗಿರುವ ಮನೋಜ್ ಪಿ.ಎ. ಅಲಿಯಾಸ್ ಮಧು ಎಂಬವರು ಮಂಗಳೂರಿನ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.ಇದೀಗ ಎಪ್ರಿಲ್ 19 ರಂದು ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.