ಕ್ರೈಂಬೆಂಗಳೂರು

ಮಹಿಳೆಯರ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಕೆ! ಸಂಧಾನಕ್ಕೆ ಕರೆಸಿ ಚುಚ್ಚಿ ಕೊಲೆಗೈದ ಯುವಕರು!

54
Spread the love

ನ್ಯೂಸ್ ನಾಟೌಟ್ : ವ್ಯಕ್ತಿಯೊಬ್ಬನನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಆರ್ ಎಂಸಿ ಯಾರ್ಡ್  ಮಾರುಕಟ್ಟೆ ಬಳಿ ಮಂಗಳವಾರ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಉಮಾಪತಿ (47) ಎಂದು ಗುರುತಿಸಲಾಗಿದೆ.

ಮೃತ ವ್ಯಕ್ತಿ ಮಹಿಳೆಯೊಬ್ಬರ ಖಾಸಗಿ ಪೋಟೋ, ವಿಡಿಯೋ ಇದೆ ಎಂದು ಬೆದರಿಸುತ್ತಿದ್ದ ಎನ್ನಲಾಗಿದೆ. ಈ ಸಂಬಂಧ ಮಹಿಳೆ ಹಾಗೂ ಆಕೆಯ ಕುಟುಂಬಸ್ಥರಿಗೂ ಮೃತ ಉಮಾಪತಿ ಬೆದರಿಕೆ ಹಾಕುತ್ತಿದ್ದ ಎನ್ನಲಾಗಿದೆ.

ಈ ಬಗ್ಗೆ ಮಾತನಾಡಲು ಮಾರ್ಕೆಟ್ ಬಳಿ ಬರುವಂತೆ ಮಹಿಳೆಯ ಕಡೆಯವರು ಹೇಳಿದ್ದರಂತೆ. ಮಾತುಕತೆ ವೇಳೆ ಮೃತ ಉಮಾಪತಿ ಹಾಗೂ ಮಹಿಳೆಯ ಕಡೆಯವರೊಂದಿಗೆ ಮಾತಿಗೆ ಮಾತು ಬೆಳೆದು ಆರಂಭವಾಗಿದ್ದು, ಈ ನಡುವೆ ಇಬ್ಬರು ವ್ಯಕ್ತಿಗಳು ಉಮಾಪತಿಗೆ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಮಾಪತಿಯನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುವ ಕೆಲಸ ಮಾಡಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಉಮಾಪತಿ ಸಾವನ್ನಪ್ಪಿದ್ದಾನೆ.

ಇನ್ನು, ಮೃತ ಉಮಾಪತಿ ಆಂಧ್ರಪ್ರದೇಶ ಮೂಲದ ವ್ಯಕ್ತಿಯಾಗಿದ್ದು, ಕಳೆದ ಕೆಲ ವರ್ಷಗಳಿಂದ ಆರ್​ಎಂಸಿ ಯಾರ್ಡ್ ನಲ್ಲಿ ಕೆಲಸ ಮಾಡುತ್ತಿದ್ದನಂತೆ. ಪ್ರಕರಣದ ಸಂಬಂಧ ಪೊಲೀಸರು ನರಸಿಂಹಯ್ಯ ಮತ್ತು ಸುನೀಲ್ ಎಂಬ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆರ್​ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಘಟನೆ ಸಂಬಂಧ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ ಎಂದು ವರದಿ ತಿಳಿಸಿದೆ.

See also  ಸುಳ್ಯ: ಸರ್ಕಾರಿ ಬಸ್ ಸ್ಟ್ಯಾಂಡ್ ಬಳಿ ಸ್ಕಿಡ್ ಆಗಿ ಸ್ಕೂಟಿ ಪಲ್ಟಿ, ಸವಾರನ ಕೈಗೆ ಗಾಯ
    Ad Widget   Ad Widget