ನ್ಯೂಸ್ ನಾಟೌಟ್: ಸುಳ್ಯದ ಹಳೆಗೇಟು ಬಳಿ ಇತ್ತೀಚೆಗೆ ನಡೆದಿದ್ದ ಬಸ್ ಚಾಲಕನ ಮೇಲಿನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗೆ ಜಾಮೀನು ಮಂಜೂರಾಗಿದೆ. ಚಾಲಕ ಗುರುಪ್ರಸಾದ್ ಎನ್ನುವವರು ಅತಿ ವೇಗದಲ್ಲಿ ವಾಹನ ಚಲಾಯಿಸಿಕೊಂಡು ಬಂದು ಎರಡು ಕಾರುಗಳಿಗೆ ಜಖಂಗೊಳಿಸಿದ್ದಾರೆಂದು ಅವರ ಮೇಲೆ ಹಲ್ಲೆ ನಡೆದಿತ್ತು ಎಂದು ಆರೋಪಿಸಲಾಗಿತ್ತು. ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಆರೋಪಿಗೆ ಜಾಮೀನು ಮಂಜೂರಾಗಿದೆ. ಆರೋಪಿ ಪರ ಸುಳ್ಯದ ವಕೀಲರಾದ ಎಂ. ವೆಂಕಪ್ಪ ಗೌಡ, ಚಂಪಾ ವಿ. ಗೌಡ, ರಾಜೇಶ್ ಬಿ.ಜಿ ಹಾಗೂ ಶ್ಯಾಮ್ ಪ್ರಸಾದ್ ಎನ್.ಕೆ ವಾದಿಸಿದ್ದರು.













