21.6 C
Sullia
Sunday, March 8, 2026

ಸುಳ್ಯ:ಎನ್ನೆಂಸಿ ವತಿಯಿಂದ ಮಾದಕ ವ್ಯಸನ ವಸ್ತು ಮುಕ್ತ ಅಭಿಯಾನ

ನ್ಯೂಸ್ ನಾಟೌಟ್ : ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಸಮಾಜಕಾರ್ಯ ವಿಭಾಗ, ಅರಂತೋಡು ಗ್ರಾಮ ಪಂಚಾಯತ್ ಹಾಗೂ ಶ್ರೀ ದುರ್ಗಾಮಾತಾ ಸಂಜೀವಿನಿ ಒಕ್ಕೂಟ ಅರಂತೋಡು ಇವುಗಳ ಸಂಯುಕ್ತಾಶ್ರಯದಲ್ಲಿ ಸೆ.29ನೇ ಸೋಮವಾರದಂದು ಅರಂತೋಡಿನಲ್ಲಿ “ಮಾದಕ ವ್ಯಸನ ವಸ್ತು ಮುಕ್ತ ಕರ್ನಾಟಕ” ಅಭಿಯಾನದ ಜಾಗೃತಿ ಕಾರ್ಯಕ್ರಮ ನಡೆಯಿತು.


Ad Widget
Ad Widget
Ad Widget
Ad Widget
Ad Widget
Ad Widget
Ad Widget


ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷ ಕೇಶವ ಅಡ್ತಲೆ, “ಸಮಾಜಕಾರ್ಯವು ಉತ್ತಮ ಕೋರ್ಸ್ ಆಗಿದ್ದು ಇದು ಸಮಾಜಮುಖಿ ಕಾರ್ಯವನ್ನು ಮಾಡುತ್ತ ಬರುತ್ತಿದೆ” ಎಂದು ಹಾರೈಸಿದರು.ನೆಹರೂ ಮೆಮೋರಿಯಲ್ ಕಾಲೇಜಿನ ಪ್ರಾಂಶುಪಾಲರಾದ ಡಾ.ರುದ್ರಕುಮಾರ್.ಎಂ.ಎಂ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು “ಯಾವುದೇ ಬದಲಾವಣೆಯು ತನ್ನಿಂದಲೇ ಆರಂಭವಾಗಬೇಕು ಆಗ ಮಾತ್ರ ಮಾದಕ ವ್ಯಸನ ಮುಕ್ತ ಭಾರತವನ್ನು ಕಟ್ಟಬಹುದು” ಎಂದರು.


ಗೌರವ ಉಪಸ್ಥಿತರಾಗಿ ಸುಳ್ಯ ಕ್ಷೇತ್ರ ಸಂಪನ್ಮೂಲ ಕೇಂದ್ರದ ಸರ್ವಶಿಕ್ಷಣ ಕರ್ನಾಟಕ ವೃತ್ತಿ ಮಾರ್ಗದರ್ಶನ ಹಾಗೂ ಆಪ್ತ ಸಮಾಲೋಚಕರಾದ ಕೃಪಾ.ಎ.ಎನ್ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ ” ಪೋಷಕರ ಪಾತ್ರ ಬಹುಮುಖ್ಯ ಮತ್ತು ಶಾಲಾ ಮಕ್ಕಳಿಗೆ ಜಾಗೃತಿ ಮೂಡಿಸುವುದು ಗಮನಾರ್ಹವಾಗಿದೆ, ನಾವೆಲ್ಲರೂ ಒಂದುಗೂಡಿ ಜಾಗೃತಿಯನ್ನು ಮೂಡಿಸಬೇಕು” ಎಂದರು.

ಮುಖ್ಯ ಅತಿಥಿಗಳಾಗಿ ನೆಹರೂ ಮೆಮೋರಿಯಲ್ ಕಾಲೇಜಿನ ಸಮಾಜಕಾರ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಶೋಭಾ.ಎ, ಪ್ರಸ್ತಾವಿಕ ಮಾತುಗಳನ್ನು ಆಡಿದರು. ಶ್ರೀ ದುರ್ಗಾಮಾತಾ ಸಂಜೀವಿನಿ ಒಕ್ಕೂಟದ ಅಧ್ಯಕ್ಷರಾದ ಪುಷ್ಪಲತಾ,ಸುಳ್ಯ ತಾಲೂಕು ಪಂಚಾಯತ್ ಕಾರ್ಯಕ್ರಮ ವ್ಯವಸ್ಥಾಪಕರಾದ ಎನ್.ಆರ್.ಎಲ್.ಎಂ ಶ್ವೇತಾ ಹಾಗೂ ಬಿ.ಆರ್.ಪಿ-ಪಿ.ಆರ್.ಐ ಜಯಲಕ್ಷ್ಮಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಎಂ.ಬಿ.ಕೆ ಸುಮತಿಯವರು ಸ್ವಾಗತಿಸಿ, ನಿಶ್ಚಿತಾ ಧನ್ಯವಾದವನ್ನು ನೆರವೇರಿಸಿ, ಜಶ್ವಂತ್.ಎ.ಡಿ. ಯವರು ಕಾರ್ಯಕ್ರಮ ನಿರೂಪಿಸಿದರು.ಸಮಾಜಕಾರ್ಯ ವಿಭಾಗದ ವಿದ್ಯಾರ್ಥಿಗಳಿಂದ ಮಾದಕ ವ್ಯಸನ ವಸ್ತು ಮುಕ್ತ ಕರ್ನಾಟಕ ಅಭಿಯಾನ ಅಡಿಯಲ್ಲಿ ಬೀದಿ ನಾಟಕವನ್ನು ಪ್ರದರ್ಶಿಸಲಾಯಿತು. ವಿದ್ಯಾರ್ಥಿಗಳಾದ ನಿಶ್ಚಿತಾ, ಜಶ್ವಂತ್.ಎ.ಡಿ,ಪ್ರೀತಿಕಾ.ಟಿ, ಸಾಥ್ವಿಕ್ ಕೆ. ವಿ., ಪ್ರಮಿತ, ಅಕ್ಷತಾ.ಕೆ. ವಿ., ಪೂಜಿತ್ ಬಿ., ಜಿತೇಶ್. ಎನ್. ಆರ್., ಆಕಾಶ್ ಗರುಗುಂಜಾ, ಹಾಗೂ ಅರ್ಪಿತಾ. ಎ ಪ್ರಸ್ತುತ ಪಡಿಸಿದರು.

Related Articles

LEAVE A REPLY

Please enter your comment!
Please enter your name here

Latest Articles