27.7 C
Sullia
Sunday, March 8, 2026

ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಅಂತಿಮ ದರ್ಶನಕ್ಕೆ ಜನಸ್ತೋಮ

ನ್ಯೂಸ್ ನಾಟೌಟ್ : ಪುಣೆಯ ಬಾರಾಮತಿಯಲ್ಲಿ ಸಂಭವಿಸಿದ ದುರಂತ ವಿಮಾನ ಅಪಘಾತದಲ್ಲಿ ನಿಧನರಾದ ಡಿಸಿಎಂ ಅಜಿತ್ ಪವಾರ್ (Ajit Pawar) ಅವರ ಅಂತ್ಯಕ್ರಿಯೆ ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಮಹಾರಾಷ್ಟ್ರ ತನ್ನ ಪ್ರೀತಿಯ ‘ದಾದಾ’ನಿಗೆ ಬೆಳಗ್ಗೆ 11 ಗಂಟೆಗೆ ವಿದಾಯ ಹೇಳಲಿದೆ. ಡಿಸಿಎಂ ಮತ್ತು ಎನ್‌ಸಿಪಿ ಮುಖ್ಯಸ್ಥ ಅಜಿತ್ ಪವಾರ್ ಅವರ ಅಂತ್ಯಕ್ರಿಯೆಯನ್ನು ಅವರ ರಾಜಕೀಯ ಭದ್ರಕೋಟೆಯಾದ ಬಾರಾಮತಿಯಲ್ಲಿ ನೆರವೇರಿಸಲಾಗುವುದು. ಅಂತ್ಯಕ್ರಿಯೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಕೂಡ ಭಾಗವಹಿಸಲಿದ್ದಾರೆ.

ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ತಮ್ಮ ಸೋದರಳಿಯನ ಅಂತ್ಯಕ್ರಿಯೆಗಾಗಿ ವಿದ್ಯಾ ಪ್ರತಿಷ್ಠಾನ ಮೈದಾನಕ್ಕೆ ಆಗಮಿಸುತ್ತಿದ್ದಾರೆ. ಎನ್‌ಸಿಪಿ ನಾಯಕಯ ಅಂತ್ಯಕ್ರಿಯೆಗೆ ವಿದ್ಯಾ ಪ್ರತಿಷ್ಠಾನ ಮೈದಾನದಲ್ಲಿ ಸಿದ್ಧತೆಗಳು ನಡೆಯುತ್ತಿವೆ. ಉಪಮುಖ್ಯಮಂತ್ರಿ ಅಹಲ್ಯಾಬಾಯಿ ಹೋಳ್ಕರ್ ಸರ್ಕಾರಿ ವೈದ್ಯಕೀಯ ಕಾಲೇಜಿನ ಹೊರಗೆ ಅವರ ಪಾರ್ಥೀವ ಶರೀರಕ್ಕೆ ಬೆಂಬಲಿಗರು ಅಂತಿಮ ನಮನ ಸಲ್ಲಿಸಲು ಜಮಾಯಿಸಿದ್ದಾರೆ. ಅಪಾರ ಸಂಖ್ಯೆಯಲ್ಲಿ ಜನರು ನೆರೆದಿದ್ದಾರೆ.

ಮಹಾರಾಷ್ಟ್ರದ ಅತಿ ಹೆಚ್ಚು ಕಾಲ ಸೇವೆ ಸಲ್ಲಿಸಿದ ಉಪಮುಖ್ಯಮಂತ್ರಿ ಅವರ ಅಂತ್ಯಕ್ರಿಯೆಯ ಮೆರವಣಿಗೆ ಬೆಳಗ್ಗೆ 9 ಗಂಟೆಗೆ ವಿದ್ಯಾ ಪ್ರತಿಷ್ಠಾನ ಕ್ಯಾಂಪಸ್ (ಗಡಿಮಾ) ನಿಂದ ಪ್ರಾರಂಭವಾಗಿದೆ. ಸಾರ್ವಜನಿಕರಿಗೆ ಗೌರವ ಸಲ್ಲಿಸಲು ಅವಕಾಶ ನೀಡಲು ನಗರದ ಮೂಲಕ ಹಾದುಹೋಗುತ್ತಿದೆ. ಬೆಳಗ್ಗೆ 11 ಗಂಟೆಗೆ ವಿದ್ಯಾ ಪ್ರತಿಷ್ಠಾನ ಮೈದಾನದಲ್ಲಿ ಮೆರವಣಿಗೆ ಮುಕ್ತಾಯಗೊಳ್ಳುತ್ತದೆ.

Related Articles

LEAVE A REPLY

Please enter your comment!
Please enter your name here

Latest Articles