ಕರಾವಳಿ

ಬೆಳ್ತಂಗಡಿ: ನಾಳೆಯಿಂದ (ಜು.7) ಪ್ರವಾಸಿಗರ ನೆಚ್ಚಿನ ತಾಣ ಗಡಾಯಿಕಲ್ಲು ಚಾರಣಕ್ಕೆ ತಾತ್ಕಾಲಿಕ ನಿಷೇಧ, ಅಷ್ಟಕ್ಕೂ ನಿಷೇಧ ಹೇರಿದ್ದು ಏಕೆ ಗೊತ್ತಾ..?

ನ್ಯೂಸ್ ನಾಟೌಟ್: ಕರಾವಳಿಯ ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ ಒಂದಾಗಿರುವ ಬೆಳ್ತಂಗಡಿ ತಾಲೂಕಿನ ನಡ ಇತಿಹಾಸ ಪ್ರಸಿದ್ಧ ಗಡಾಯಿಕಲ್ಲು ಚಾರಣಕ್ಕೆ ಜು.7 ರಿಂದ ತಾತ್ಕಾಲಿಕ ನಿಷೇಧ ಹೇರಲಾಗಿದೆ.

ಸದ್ಯ ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿದೆ. ಕಲ್ಲುಗಳಿಂದ ಆವೃತ್ತವಾಗಿರುವ ಈ ಸ್ಥಳದಲ್ಲಿ ಹೆಚ್ಚು ಜಾರುತ್ತಿದೆ. ಇದರಿಂದ ಚಾರಣಿಗರಿಗೆ ಅಪಾಯ ಎದುರಾಗುವ ಸಾಧ್ಯತೆ ಇರುವುದರಿಂದ ಈ ಆದೇಶವನ್ನು ಹೊರಡಿಸಲಾಗಿದೆ ಎಂದು ತಿಳಿದು ಬಂದಿದೆ.

ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದ ವ್ಯಾಪ್ತಿಯಲ್ಲಿರುವ ಗಡಾಯಿಕಲ್ಲಿಗೆ ಜು.7ರಿಂದ ಮುಂದಿನ ಆದೇಶದ ತನಕ ಸಾರ್ವಜನಿಕರಿಗೆ ಪ್ರವೇಶ ಇರುವುದಿಲ್ಲ ಎಂದು ವನ್ಯ ಜೀವಿ ವಿಭಾಗದ ಬೆಳ್ತಂಗಡಿ ಆರ್ ಎಫ್ ಒ ಸ್ವಾತಿ ನ್ಯೂಸ್ ನಾಟೌಟ್‌ ಗೆ ತಿಳಿಸಿದ್ದಾರೆ.

Related posts

ವಿಟ್ಲ: ಅನ್ಯಕೋಮಿನ ಯುವಕರೊಂದಿಗೆ ಹಿಂದೂ ಯುವತಿ ಪತ್ತೆ,ಸ್ಥಳಕ್ಕಾಗಮಿಸಿದ ಪೊಲೀಸರು

ಮಂಡೆಕೋಲು: ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜಿನ ರಾ.ಸೇ.ಯೋ. ವಾರ್ಷಿಕ ವಿಶೇಷ ಶಿಬಿರ;ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದ ಎಓಎಲ್‌ಇ ಅಧ್ಯಕ್ಷ ಡಾ.ಕೆ.ವಿ. ಚಿದಾನಂದ

ಮಂಗಳೂರಲ್ಲಿ ಕಾರು-ಸ್ಕೂಟರ್‌ ಭೀಕರ ಅಪಘಾತ