ನ್ಯೂಸ್ ನಾಟೌಟ್: ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು ಮತ್ತು ಹಿರಿಯ ವಿದ್ಯಾರ್ಥಿ ಸಂಘ ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ ಇದರ ಸಹಯೋಗದಲ್ಲಿ ಗಡಿನಾಡು ಸುಳ್ಯ ಪರಿಸರದ ಭಾಷಾ ಪರಂಪರೆ ಎಂಬ ವಿಷಯದಲ್ಲಿ ಒಂದು ದಿನದ ವಿಚಾರಗೋಷ್ಠಿ ಫೆ.25ರಂದು ಸುಳ್ಯದ ಎನ್ನೆಂಸಿ ಯಲ್ಲಿ ನಡೆಯಲಿದ್ದು, ಇದರ ಆಮಂತ್ರಣ ಪತ್ರವನ್ನು ಕಾಲೇಜಿನಲ್ಲಿ ಬಿಡುಗಡೆಗೊಳಿಸಲಾಯಿತು.
ಕಾಲೇಜಿನ ಪ್ರಾಂಶುಪಾಲ ಡಾ.ರುದ್ರಕುಮಾರ್ ಎಂ.ಎಂ. ಇವರ ಉಪಸ್ಥಿತಿಯಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ಸಭೆ ನಡೆಯಿತು. ಆಮಂತ್ರಣವನ್ನು ವಿಶ್ರಾಂತ ಪ್ರಾಂಶುಪಾಲ ಡಾ. ಪೂವಪ್ಪ ಕಣಿಯೂರು ಹಾಗೂ ಎನ್ನೆಂಸಿ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕೆ.ಟಿ. ವಿಶ್ವನಾಥ್ ಬಿಡುಗಡೆಗೊಳಿಸಿದರು. ಈ ಸಂದರ್ಭ ಎನ್ನೆಂಸಿ ಹಿರಿಯ ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಮಧುರಾ ಎಂ.ಆರ್., ಕೋಶಾಧಿಕಾರಿ ಲೋಕೇಶ್ ಪೆರ್ಲಂಪಾಡಿ, ನಿರ್ದೇಶಕರಾದ ಕುಲದೀಪ್ ಪೆಡ್ಕ, ರಜತ್ ಅಡ್ಕಾರ್, ಕೌಶಲ್ ಸುಳ್ಯ, ಶಿವಪ್ರಸಾದ್ ಕೇರ್ಪಳ ಉಪಸ್ಥಿತರಿದ್ದರು.













