21.6 C
Sullia
Sunday, March 8, 2026

ನೆಲ್ಯಾಡಿ: ಮಂಚದ ಕೆಳಗೆ ರಕ್ತದ ಮಡುವಿನಲ್ಲಿ ಬಿದ್ದಿದ್ದ ವೃದ್ದ, ಸಾವಿನ ಸುತ್ತ ಅನುಮಾನದ ಹುತ್ತ

ನ್ಯೂಸ್ ನಾಟೌಟ್: ಬೆಳ್ತಂಗಡಿಯಲ್ಲಿ ಬಾಲಕ ಸುಮಂತ್ ಕೊಲೆಯ ನಿಗೂಢ ರಹಸ್ಯ ಇನ್ನೂ ಹೊರ ಬಂದಿಲ್ಲ. ಈ ಬೆನ್ನಲ್ಲೇ ನೆಲ್ಯಾಡಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ವೃದ್ದರೊಬ್ಬರು ಸಾವಿಗೀಡಾಗಿದ್ದಾರೆ. ಮೃತರನ್ನು ಕೆ.ಸಿ ವರ್ಗೀಸ್ ಎಂದು ಗುರುತಿಸಲಾಗಿದೆ. ಅವರಿಗೆ 73 ವರ್ಷವಾಗಿತ್ತು.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಕೆ.ಸಿ ವರ್ಗೀಸ್ ಅವರ ಪತ್ನಿಯನ್ನು ನೆಲ್ಯಾಡಿಯ ಅಶ್ವಿನಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕುಟುಂಬದ ಸದಸ್ಯರು ಕರೆದುಕೊಂಡು ಹೋಗಿದ್ದರು. ಈ ವೇಳೆ ವರ್ಗೀಸ್ ರವರು ಮನೆಯಲ್ಲಿ ಒಬ್ಬರೇ ಇದ್ದರು. ಮನೆಯವರು ವಾಪಸ್ ಮನೆಗೆ ಬಂದಾಗ ಮನೆಯಲ್ಲಿ ಮಂಚದ ಕೆಳಗೆ ರಕ್ತದ ಮಡುವಿನಲ್ಲಿ ವರ್ಗೀಸ್ ರವರು ಬಿದ್ದಿದ್ದಾರೆ. ತಕ್ಷಣ ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದರು. ಸದ್ಯ ದೂರಿನ ಪ್ರಕಾರವಾಗಿ ಕಡಬ ತಾಲೂಕು ರವರ ದೂರಿನ ಅನ್ವಯ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಯುಡಿಆರ್ 07/2026, ಕಲಂ 194 (III)(IV) BNSS 2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related Articles

LEAVE A REPLY

Please enter your comment!
Please enter your name here

Latest Articles