21.6 C
Sullia
Sunday, March 8, 2026

ಮಂಗಳೂರಿಗೆ ತೆರಳುವವರಿಗೆ ಮಹತ್ವದ ಮಾಹಿತಿ, ಇಂದಿನಿಂದ ಚತುಷ್ಪಥ ರಸ್ತೆ ಕಾಮಗಾರಿ ಆರಂಭ, ಭಾರೀ ವಾಹನ ದಟ್ಟಣೆ ಸಾಧ್ಯತೆ, ಪರ್ಯಾಯ ಮಾರ್ಗಗಳ ವಿವರ ಇಲ್ಲಿದೆ ಓದಿ.

ನ್ಯೂಸ್ ನಾಟೌಟ್: ಮಂಗಳೂರು ನಗರದಲ್ಲಿ ಚತುಷ್ಪಥ ರಸ್ತೆ ಕಾಮಗಾರಿ ಫೆ.15ರಿಂದ ಆರಂಭಗೊಂಡಿದೆ. ಮುಂದಿನ 4 ತಿಂಗಳುಗಳ ಕಾಲ ಕಾಮಗಾರಿ ನಡೆಯಲಿದೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಈ ಹಿನ್ನೆಲೆಯಲ್ಲಿ ನಗರದ ಪಂಪ್ ವೆಲ್ ಸರ್ಕಲ್ ನಿಂದ ಕರಾವಳಿ ಜಂಕ್ಷನ್ ವರೆಗಿನ ಚತುಷ್ಪಥ ರಸ್ತೆಯ ಅಭಿವೃದ್ದಿ ಕಾಮಗಾರಿಗಳನ್ನು ಲೋಕೋಪಯೋಗಿ ಇಲಾಖೆಯಿಂದ ನಡೆಸಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತ ದೃಷ್ಟಿಯಿಂದ ಪತ್ರಿಕಾ ಪ್ರಕಟಣೆ ಹೊರಡಿಸಲಾಗಿದೆ. ಪಂಪುವೆಲ್ ವೃತ್ತದಿಂದ ಕಂಕನಾಡಿ ಹಳೇ ರಸ್ತೆ – ಕಂಕನಾಡಿ ಜಂಕ್ಷನ್‌ಗೆ (ಮಂಗಳೂರು ನಗರಕ್ಕೆ ಒಳಬರುವ ರಸ್ತೆ) ಮತ್ತು ಕರಾವಳಿ ಜಂಕ್ಷನ್‌ನಿಂದ – ಪಂಪುವೆಲ್ ವೃತ್ತ ದವರೆಗಿನ (ಮಂಗಳೂರು ನಗರದಿಂದ ಹೊರ ಹೋಗುವ ರಸ್ತೆ) ಬೈಪಾಸ್ ರಸ್ತೆಗಳನ್ನು ತಾತ್ಕಾಲಿಕವಾಗಿ ಎಕಮುಖ ರಸ್ತೆಗಳನ್ನಾಗಿ ಮಾರ್ಪಾಡು ಮಾಡಲಾಗಿದೆ. ಸದ್ರಿ ರಸ್ತೆಯಲ್ಲಿ ವಾಹನ ದಟ್ಟನೆ ಉಂಟಾಗಲಿದ್ದು, ಸಾರ್ವಜನಿಕರಿಗಾಗಿ ಪಂಪ್ ವೆಲ್ ಜಂಕ್ಷನ್ ನಿಂದ ಕರಾವಳಿ ಜಂಕ್ಷನ್‌ಗೆ ಹೋಗುವ ವಾಹನಗಳನ್ನು ನಿರ್ಬಂಧಿಸಿ, ಕಂಕನಾಡಿ ಹಳೇ ರಸ್ತೆ ಮೂಲಕ ಸಂಚರಿಸಲು ಅನುವು ಮಾಡಿಕೊಡಲಾಗಿದೆ. ತಲಪಾಡಿ, ತೊಕ್ಕೊಟ್ಟು ಕಡೆಯಿಂದ ಮಂಗಳೂರು ನಗರಕ್ಕೆ ಪ್ರವೇಶಿಸುವ ಎಲ್ಲಾ ವಾಹನಗಳು ಪರ್ಯಾಯ ರಸ್ತೆಯಾದ ಮಹಾಕಾಳಿಪಡ್ಪು, ಮಾರ್ಗನ್ಸ್ ಗೇಟ್, ಕೋಟಿಚೆನ್ನಯ ಸರ್ಕಲ್ ಅಥವಾ ಮಂಗಳಾದೇವಿ ಮುಖಾಂತರ ಸಂಚರಿಸಲು ವ್ಯವಸ್ಥೆ ಇದೆ. ಬಿ.ಸಿ ರೋಡ್ ಕಡೆಯಿಂದ ಬರುವಂತಹ ಭಾರಿ ವಾಹನಗಳು, ಇತರೆ ವಾಹನಗಳು ಮತ್ತು ಲಾಲ್‌ಬಾಗ್ ಬಸ್ಸು ನಿಲ್ದಾಣಕ್ಕೆ ತೆರಳುವ KSRTC ಬಸ್ಸುಗಳು ಪಡೀಲ್ ಜಂಕ್ಷನ್‌ ನಿಂದ ನಂತೂರು ಕಡೆಗೆ ಹಾಗೂ ಕೇರಳ-ಕಾಸರಗೋಡು ಕಡೆಯಿಂದ ಕರಾವಳಿ ಕಡೆಗೆ ಬರುವ ಭಾರಿ ವಾಹನಗಳು ಮತ್ತು KSRTC ಬಸ್ಸುಗಳು ಪಂಪ್ ವೆಲ್ ಜಂಕ್ಷನ್ ನಿಂದ ನಂತೂರು ಕಡೆಗೆ ಸಂಚರಿಸಬಹುದಾಗಿದೆ.

ಮಂಗಳೂರು ನಗರದ ಒಳಭಾಗದಿಂದ ಕರಾವಳಿ ಜಂಕ್ಷನ್ ಕಡೆಯಿಂದ ಪಂಪುವೆಲ್ ಕಡೆಗೆ ಸಂಚರಿಸುವ ವಾಹನಗಳು ಯಥವಾತ್ತಾಗಿ ಸಂಚರಿಸಬಹುದು. ಕಂಕನಾಡಿ ಜಂಕ್ಷನ್-ಪಂಪುವೆಲ್ ರಸ್ತೆ(ಕಂಕನಾಡಿ ಓಲ್ಡ್ ರಸ್ತೆ), ಕರಾವಳಿ-ಕಂಕನಾಡಿ ರಸ್ತೆ, ಕಂಕನಾಡಿ-ಫಳ್ನೀರ್ ಹೈಲ್ಯಾಂಡ್ ಆಸ್ಪತ್ರೆ ರಸ್ತೆ, ಕರಾವಳಿ-ಬಲ್ಮಠ ರಸ್ತೆ ಹಾಗೂ ಕಂಕನಾಡಿ ಬೈಪಾಸ್ ರಸ್ತೆಯ ಎರಡೂ ಕಡೆಗಳಲ್ಲಿ ವಾಹನ ನಿಲುಗಡೆ ಮಾಡುವಂತಿಲ್ಲ. ಸದರಿ ಕಾಮಗಾರಿ ಮತ್ತು ಮಾರ್ಗ ಬದಲಾವಣೆ ಸಮಯ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗುವ ಸಾಧ್ಯತೆಗಳು ಇರುವುದರಿಂದ ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಲು ಮಂಗಳೂರು ನಗರ ಪೊಲೀಸ್ ಆಯುಕ್ತರು ಮನವಿ ಮಾಡಿದ್ದಾರೆ.

Related Articles

LEAVE A REPLY

Please enter your comment!
Please enter your name here

Latest Articles