ನ್ಯೂಸ್ ನಾಟೌಟ್: ಹಣದ ಬೇಡಿಕೆ ಇಟ್ಟು ಲಂಚ ಸ್ವೀಕಾರ ಮಾಡುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಸಂಪಾಜೆ- ಅರಂತೋಡಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಗ್ರಾಮ ಲೆಕ್ಕಾಧಿಕಾರಿಯನ್ನು ಬಂಧಿಸಿದ್ದಾರೆ.
ಅರಂತೋಡಿನ ವ್ಯಕ್ತಿಯೊಬ್ಬರು ಹಕ್ಕು ಖುಲಾಸೆಗಾಗಿ ಅರ್ಜಿ ಸ್ವೀಕರಿಸಿದ್ದರು. ಈ ವೇಳೆ ಕಡತ ವಿಲೇವಾರಿಗಾಗಿ ಲಂಚದ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮ ಲೆಕ್ಕಾಧಿಕಾರಿ ಮಿಯಾಸಾಬ್ ಮುಲ್ಲಾ ಇಂದು (ಶನಿವಾರ) ಹಣ ಸ್ವೀಕರಿಸುತ್ತಿದ್ದಾಗ ಬಲೆಗೆ ಬಿದ್ದಿದ್ದಾರೆ ಎನ್ನಲಾಗಿದೆ.
ಸುಳ್ಯ ತಾಲೂಕು ಕಚೇರಿಯಲ್ಲಿ ಇದೀಗ ಗ್ರಾಮ ಲೆಕ್ಕಾಧಿಕಾರಿಯ ವಿಚಾರಣೆಯನ್ನು ನಡೆಸುತ್ತಿದ್ದಾರೆ. ಎಷ್ಟು ಹಣ ತೆಗೆದುಕೊಂಡಿದ್ದಾರೆ ಅನ್ನುವುದು ಇನ್ನೂ ಗೊತ್ತಾಗಿಲ್ಲ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ. ಈ ಮೂಲಕ ಲಂಚ ಭ್ರಷ್ಟಾಚಾರ ಸುಳ್ಯದಲ್ಲಿ ಎಗ್ಗಿಲ್ಲದೆ ನಡೆಯುತ್ತಿದೆ ಅನ್ನುವುದು ಸಾಬೀತಾದಂತಾಗಿದೆ. ಎಸ್ಪಿ ಸೈಮನ್, ಡಿವೈಎಸ್ಪಿ ಚೆಲುವರಾಜ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.