ನೆಲ್ಯಾಡಿ: ಇಲ್ಲಿನ ಕೊಣಾಲು ಗ್ರಾಮದ ಅಂಬರ್ಜೆ ಎಂಬಲ್ಲಿ ಬೆಳಗ್ಗೆ ಆಕಸ್ಮಿಕವಾಗಿ ಕೆರೆಗೆ ಬಿದ್ದು ಬಾಲಕಿ ಮೃತಪಟ್ಟ ಘಟನೆ ನಡೆದಿದೆ. ಮೃತಳನ್ನು ಅಂಬರ್ಜೆ ನಿವಾಸಿ ಮೋಹನ ಹಾಗೂ ವಿನೋದ ದಂಪತಿಯ ಪುತ್ರಿ ರಾಮಕುಂಜೇಶ್ವರ ಪ.ವೂ.ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಶ್ರೇಯಾ (18 ) ಎಂದು ಗುರುತಿಸಲಾಗಿದೆ. ಮನೆಯ ಸಮೀಪದ ಕೆರೆಗೆ ತಾವರೆ ಹೂ ಬಿಡಲೆಂದು ತೆರಳಿದ ವೇಳೆ ದುರ್ಘಟನೆ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
- +91 73497 60202
- [email protected]
- October 6, 2024 11:02 PM