ದೇಶದಲ್ಲಿ ಗ್ಯಾಸ್ ಪೂರೈಕೆ ವ್ಯತ್ಯಯ; ಕುಕ್ಕೆಯಲ್ಲಿ ಬೆಳಗ್ಗಿನ ಉಪಹಾರದಲ್ಲಿ ಬದಲಾವಣೆ

ನ್ಯೂಸ್ ನಾಟೌಟ್ : ಇಸ್ರೆಲ್ ಇರಾನ್ ಯುದ್ಧದ ಎಫೆಕ್ಟ್ ಭಾರತಕ್ಕೂ ತಲುಪಿದೆ. ದೇಶದಲ್ಲಿ ಗ್ಯಾಸ್ ವ್ಯತ್ಯಯ ಉಂಟಾಗಿದ್ದು, ಇದೀಗ ಈ ಬಿಸಿ ರಾಜ್ಯದ ಶ್ರೀಮಂತ ದೇವಸ್ಥಾನ ಕುಕ್ಕೆ ಸುಬ್ರಹ್ಮಣ್ಯಕ್ಕೂ ತಟ್ಟಿದೆ. ‌ಗ್ಯಾಸ್ ಪೊರೈಕೆ ವ್ಯತ್ಯಯದಿಂದ ಮಾ.11ರ ಬುಧವಾರದಿಂದ ಬೆಳಗ್ಗಿನ ಉಪಹಾರದಲ್ಲಿ ಬದಲಾವಣೆ ಮಾಡಲಾಗಿದೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget


ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪ್ರತಿದಿನ ಬೆಳಗ್ಗೆ ವಿವಿಧ ಬಗೆಯ ಉಪಹಾರ ನೀಡಲಾಗುತ್ತಿತ್ತು, ಇದೀಗ ಗ್ಯಾಸ್ ಪೊರೈಕೆ ವ್ಯತ್ಯಯದಿಂದ ಬೇಯಿಸುವ ತಿನಿಸು ಬದಲಾಗಿ, ಅವಲಕ್ಕಿ, ಮೊಸರು ವಿತರಣೆ ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ.


ದೇವಸ್ಥಾನದಲ್ಲಿ ಮುಂದಿನ 3 ದಿನಕ್ಕೆ ಬೇಕಾಗುವಷ್ಟು ಗ್ಯಾಸ್ ಲಭ್ಯವಿದ್ದು, ಬಳಿಕದಲ್ಲೂ ಪೊರೈಕೆ ಆಗದೇ ಇದ್ದಲ್ಲಿ ಸಮಸ್ಯೆ ಆಗಲಿದೆ ಎನ್ನಲಾಗಿದೆ. ಗ್ಯಾಸ್ ಪೊರೈಕೆ ಸಂಸ್ಥೆಯವರಿಗೆ ದಿನಕ್ಕೆ 20 ಸಿಲಿಂಡರ್ ಗ್ಯಾಸ್ ಪೊರೈಕೆ ಮಾಡಲು ದೇವಸ್ಥಾನದ ವತಿಯಿಂದ ಪತ್ರ ಬರೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ಮತ್ತೂ ಪೊರೈಕೆ ಆಗದೇ ಇದ್ದಲ್ಲಿ ಮಧ್ಯಾಹ್ನದ ಭೋಜನ ಪ್ರಸಾದ ವಿತರಣೆಯಲ್ಲೂ ಕೆಲ ಬದಲಾವಣೆ ಮಾಡಲು ಚಿಂತನೆ ನಡೆಸಲಾಗಿದ್ದು, ಬದಲಾವವಣೆ ಮಾಡುವುದಿದ್ದಲ್ಲಿ ಈ ಬಗ್ಗೆ ದೇವಸ್ಥಾನದ ವತಿಯಿಂದ ಅಧಿಕೃತ ಮಾಹಿತಿ ನೀಡಲಾಗುತ್ತದೆ
ಎಂದು ತಿಳಿದುಬಂದಿದೆ.

Related Articles

LEAVE A REPLY

Please enter your comment!
Please enter your name here

Latest Articles