ನ್ಯೂಸ್ ನಾಟೌಟ್ :ಸುಳ್ಯದ ಅಕ್ಷರ ಬ್ರಹ್ಮ ಡಾ.ಕುರುಂಜಿ ವೆಂಕಟ್ರಮಣ ಗೌಡರ 95 ನೇ ಹುಟ್ಟುಹಬ್ಬ ಪ್ರಯುಕ್ತ ವಿಶೇಷ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ‘ಕೆ.ವಿ.ಜಿ. ಸುಳ್ಯ ಹಬ್ಬ ಸಮಿತಿ’ ವತಿಯಿಂದ ‘ಕೆ.ವಿ.ಜಿ. ಸಾಧನೆ – ಸಂಸ್ಮರಣೆ ಕಾರ್ಯಕ್ರಮ’ವು ಸುಳ್ಯ ತಾಲೂಕಿನ 25 ಪ್ರೌಢ ಶಾಲೆಗಳಲ್ಲಿ ಇಂದು ನಡೆಯಿತು.ಈ ಹಿನ್ನಲೆ ಎನ್.ಎಂ.ಸಿ.ಯಲ್ಲಿ ಇಂದು ಕಾರ್ಯಕ್ರಮದ ಉದ್ಘಾಟನೆಯನ್ನು ಸುಳ್ಯ ಹಬ್ಬ ಸಮಿತಿ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಅವರು ನೆರವೇರಿಸಿದರು.
ಈ ಸಂದರ್ಭ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಪೂರ್ವ ಪ್ರಾಂಶುಪಾಲ ಡಾ.ಎನ್.ಎ. ಜ್ಞಾನೇಶ್, ಕುರುಂಜಿಯವರ ಸಾಧನೆಗಳ ಬಗ್ಗೆ ವಿವರವಾಗಿ ಹೇಳಿದರು.ಇದೇ ವೇಳೆ ಸುಳ್ಯ ಹಬ್ಬ ಸಮಿತಿಯ ಅಧ್ಯಕ್ಷ ಚಂದ್ರಶೇಖರ ಪೇರಾಲು, ಕಾರ್ಯದರ್ಶಿ ದಿನೇಶ್ ಅಂಬೆಕಲ್ಲು, ಖಜಾಂಚಿ ಜನಾರ್ದನ್ ನಾಯ್ಕ್, ಉಪನ್ಯಾಸಕಿ ಶ್ರೀಮತಿ ರತ್ನಾವತಿ ಉಪಸ್ಥಿತರಿದ್ದರು.
ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದ ವಿದ್ಯಾರ್ಥಿನಿ ಕೆವಿಜಿಯವರ ಕುರಿತು ಮಾತನಾಡಿದರು.ಪ್ರೊ.ರತ್ನಾವತಿ ಸ್ವಾಗತಿಸಿ, ಚಂದ್ರಶೇಖರ ಪೇರಾಲು ವಂದಿಸಿದರು. ಹರಿಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.