ನ್ಯೂಸ್ ನಾಟೌಟ್ : ಧರ್ಮಸ್ಥಳ ಬುರುಡೆ ಕೇಸ್ ಗೆ ಸಂಬಂಧಿಸಿದಂತೆ ಎಸ್.ಐ.ಟಿ ಅಧಿಕಾರಿಗಳು. ಅರಣ್ಯ ಇಲಾಖೆ ಅಧಿಕಾರಿಗಳ ಜೊತೆ ಮತ್ತೆ ಬಂಗ್ಲೆ ಗುಡ್ಡೆಗೆ ಎಂಟ್ರಿಯಾಗಿದ್ದಾರೆ.
ಧರ್ಮಸ್ಥಳ ಗ್ರಾಮದ ನೇತ್ರಾವತಿಯ ಬಂಗ್ಲೆಗುಡ್ಡೆ ಪ್ರದೇಶಕ್ಕೆ ಇಂದು ಮಧ್ಯಾಹ್ನ ಗಂಟೆಗೆ ಎಸ್.ಐ.ಟಿ ಅಧಿಕಾರಿಗಳು ಬೆಳ್ತಂಗಡಿ ಅರಣ್ಯ ಇಲಾಖೆ ಅಧಿಕಾರಿಗಳನ್ನು ಕರೆದುಕೊಂಡು ಬಂದು ಸರ್ವೆ ಕಾರ್ಯ ನಡೆಸುತ್ತಿದ್ದಾರೆ.
ಏಳು ಅಸ್ಥಿಪಂಜರ ಪತ್ತೆಯಾದ ಜಾಗವು ಅರಣ್ಯ ಇಲಾಖೆಗೆ ಸೇರಿದ
ಜಾಗ ಎಂದು ಸರ್ವೆ ಮಾಡಿ ಎಸ್.ಐ.ಟಿ ಅಧಿಕಾರಿಗಳಿಗೆ ವರದಿ
ನೀಡಲು ಆಗಮಿಸಿದ್ದಾರೆ ಎಂಬ ಮಾಹಿತಿ
ಲಭ್ಯವಾಗಿದೆ.













