ನ್ಯೂಸ್ ನಾಟೌಟ್ : ಧರ್ಮಸ್ಥಳದಲ್ಲಿ ನೂರಾರು ಶವಗಳ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಅನನ್ಯಾ ಭಟ್ ಕೇಸ್ನಲ್ಲಿ ಎಸ್ಐಟಿ ತನಿಖೆ ಇದೀಗ ಮುಂದುವರಿಸಿದೆ. ಬಹುಭಾಷಾ ನಟ, ನಿರ್ದೇಶಕನ ಸಹೋದರನಿಗೆ ಎಸ್ಐಟಿ (SIT) ನೋಟಿಸ್ ನೀಡಲು ಮುಂದಾಗಿದೆ ಎಂದು ತಿಳಿದು ಬಂದಿದೆ.
ಈ ಮೊದಲು ಅನನ್ಯಾ ಭಟ್ ಬಗ್ಗೆ ಸುಜಾತಾ ಭಟ್ ಎಲ್ಲರನ್ನು ನಂಬಿಸುವ ಕೆಲಸ ಮಾಡಿದ್ದರು. ಬಳಿಕ ಇದೆಲ್ಲವನ್ನು ಜಮೀನು ವಿಚಾರವಾಗಿ ಮಾಡಿರುವುದಾಗಿ ಒಪ್ಪಿಕೊಂಡಿದ್ದರು. ಇದೀಗ ಅನನ್ಯಾ ಭಟ್ ಕೇಸ್ ಮತ್ತೆ ಮುನ್ನೆಲೆಗೆ ಬಂದಿದ್ದು, ಪ್ರಕರಣದ ತನಿಖೆಯನ್ನು ಎಸ್ಐಟಿ ಮುಂದುವರಿಸಿದೆ.
ವಾಸಂತಿ ಕೇಸ್ ಬಗ್ಗೆ ತನಿಖೆಗಿಳಿದಾಗ ಎಸ್ಐಟಿಗೆ ಬಹುಭಾಷಾ ನಟನ ಸಹೋದರನ ಹೆಸರು ಕೇಳಿಬಂದಿದೆ. ನಟನ ಸಹೋದರ ಕೂಡ ಕಾಲಿವುಡ್ ನಟನಾಗಿದ್ದು, ವಾಸಂತಿ ಗಂಡನ ಗೆಳೆಯ ಎಂದು ತಿಳಿದುಬಂದಿದೆ. ಸದ್ಯ ಕಾಲಿವುಡ್ ನಟ ಚೆನ್ನೈನಲ್ಲಿರುವುದಾಗಿ ಮಾಹಿತಿಯಿದ್ದು, ಆತನ ವಿಳಾಸ ಪತ್ತೆ ಮಾಡುವಲ್ಲಿ ಎಸ್ಐಟಿ ಕಾರ್ಯನಿರತವಾಗಿದೆ. ವಿಳಾಸ ಸಿಗದ ಹಿನ್ನೆಲೆ ನೋಟಿಸ್ ನೀಡಲು ವಿಳಂಬವಾಗಿದೆ.













